ನವದೆಹಲಿ: ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಯಶಸ್ವಿನ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಪೆಟ್ರೋಲಿಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ಅವರು, ಸುಮಾರು 3.36 ಕೋಟಿ ಮಂದಿ ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ ಎಂದರು.
ಒಟ್ಟು 3.6 ಕೋಟಿ ಜನರು ಈ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಪಡೆದುಕೊಂಡಿದ್ದಾರೆ. ಇದರಲ್ಲಿ ಶೇ.44ರಷ್ಟು ಫಲಾನುಭವಿಗಳು ಎಸ್ಸಿ/ಎಸ್ಟಿ ಸಮುದಾಯದವರೇ ಆಗಿದ್ದಾರೆ ಎಂದರು.
2016ರಲ್ಲಿ ಬಡ ಮಹಿಳೆಯರ ಒಳಿತಿಗಾಗಿ ಈ ಯೋಜನೆಯನ್ನು ಜಾರಿಗೊಳಿಸಲಾಗಿತ್ತು, ಕಟ್ಟಿಗೆಯ ಮೂಲಕ ಒಲೆಯಲ್ಲಿ ಅಡುಗೆ ಮಾಡುವ ಬಡ ಮಹಿಳೆಯರಿಗೆ ಗ್ಯಾಸ್ ಒದಗಿಸುವ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.