ಮುಂಬಯಿ: ಕಳ್ಳತನ ಮಾಡಿದ ಎಂದು ಆರೋಪಿಸಿ ಯುವಕರ ಗುಂಪೊಂದು ಬುಡಕಟ್ಟು ಸಮುದಾಯದ ಬಡ ಯುವಕನೊಬ್ಬನನ್ನು ಥಳಿಸಿ ಕೊಂದ ಘಟನೆ ಕೇರಳದಲ್ಲಿ ಕಳೆದ ತಿಂಗಳು ನಡೆದಿತ್ತು. ಈ ಯುವಕನ ಕುಟುಂಬಕ್ಕೆ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ನೆರವಿನ ಹಸ್ತ ಚಾಚಿದ್ದಾರೆ.
ಪಲಕ್ಕಾಡ್ನ ಅಟ್ಟಪ್ಪಾಡಿಯಲ್ಲಿ ಈ ಘಟನೆ ನಡೆದಿದ್ದು, ಇಡೀ ದೇಶವನ್ನೇ ತಲ್ಲಣಗೊಳಿಸಿತ್ತು. ಹೊಟ್ಟೆ ಪಾಡಿಗೆ ಕಳ್ಳತನ ಮಾಡಿದ್ದ ಈತನನ್ನು ಮರಕ್ಕೆ ಕಟ್ಟಿದ್ದ ಗುಂಪು ಚಿತ್ರಹಿಂಸೆ ನೀಡಿ ಆತನೊಂದಿಗೆ ಸೆಲ್ಫಿ ಕ್ಲಿಕ್ಕಿಸಿ ಬಳಿಕ ಕೊಲೆ ಮಾಡಿತ್ತು.
ಕಡು ಬಡತನದ ಮಧು ಕುಟುಂಬಕ್ಕೆ ವಿರೇಂದ್ರ ಸೆಹ್ವಾಗ್ ನೀಡಿದ್ದು, ರೂ.1.5 ಲಕ್ಷ ರೂಪಾಯಿಗಳನ್ನು ಆತನ ತಾಯಿಗೆ ಕಳಹಿಸಿಕೊಟ್ಟಿದ್ದಾರೆ. ಈ ವಿಷಯವನ್ನು ಹೋರಾಟಗಾರ ರಾಹುಲ್ ಈಶ್ವರ್ ಸ್ಪಷ್ಟಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.