ಜೋಧ್ಪುರ: 1998ರ ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಲ್ಮಾನ್ ಖಾನ್ ತಪ್ಪಿತಸ್ಥ ಎಂದು ಜೋಧ್ಪುರ ನ್ಯಾಯಾಲಯ ಗುರುವಾರ ತೀರ್ಪಿತ್ತಿದೆ.
ಪ್ರಕರಣದಲ್ಲಿ ಆರೋಪಿಗಳಾಗಿದ್ದ ಟಬು, ಸೈಫ್ ಅಲಿ ಖಾನ್, ಸೊನಾಲಿ ಬೇಂದ್ರೆ, ನೀಲಮ್ ಅವರನ್ನು ಖುಲಾಸೆಗೊಳಿಸಲಾಗಿದೆ.
ವನ್ಯಜೀವಿ ರಕ್ಷಣಾ ಕಾಯ್ದೆಯ ಸೆಕ್ಷನ್ 9/51 ಅಡಿಯಲ್ಲಿ ಸಲ್ಮಾನ್ ತಪ್ಪಿತಸ್ಥ ಎಂದು ಘೋಷಿಸಲಾಗಿದ್ದು, ಕನಿಷ್ಠ 2 ವರ್ಷಗಳ ಸೆರೆವಾಸವನ್ನು ವಿಧಿಸುವ ನಿರೀಕ್ಷೆ ಇದೆ.
ಸಲ್ಮಾನ್ ವಕೀಲರು ಶಿಕ್ಷೆಯ ಪ್ರಮಾಣವನ್ನು ಕಡಿಮೆಗೊಳಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.