ನವದೆಹಲಿ: ಇದೇ ಮೊದಲ ಬಾರಿಗೆ ಭಾರತೀಯ ವಿಜ್ಞಾನಿಗಳು ಡೆಂಗ್ಯೂ ಚಿಕಿತ್ಸೆಗೆ ಆಯುರ್ವೇದಿಕ್ ಔಷಧವನ್ನು ಅಭಿವೃದ್ಧಿಪಡಿಸಿದ್ದಾರೆ. ಮುಂದಿನ ವರ್ಷ ಈ ಔಷಧಿ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ.
ಆಯುಷ್ ಸಚಿವಾಲಯ ಮತ್ತು ಬೆಳಗಾವಿಯ ಪ್ರಾದೇಶಿಕ ಸಂಶೋಧನಾ ಸಂಸ್ಥೆ ಐಸಿಎಂಆರ್ ಅಧೀನದಲ್ಲಿರುವ ಸೆಂಟ್ರಲ್ ಕೌನ್ಸಿಲ್ ಫಾರ್ ರಿಸರ್ಚ್ ಇನ್ ಆಯುರ್ವೇದಿಕ್ ಸೈನ್ಸ್ ಈ ಔಷಧಿಯನ್ನು ಅಭಿವೃದ್ಧಿಪಡಿಸಿದ್ದು, ಸುರಕ್ಷತೆ ಮತ್ತು ಸಾಮರ್ಥ್ಯದ ಬಗ್ಗೆ ನಡೆಸಲಾದ ಪ್ರಾಯೋಗಿಕ ಪರೀಕ್ಷೆಯಲ್ಲಿ ಯಶಸ್ವಿಯಾಗಿದೆ.
ಶತಮಾನದಿಂದ ಆಯುರ್ವೇದದ ಔಷಧಿ ವ್ಯವಸ್ಥೆಯಲ್ಲಿ ಬಳಸಲಾಗುವ 7 ವಿವಿಧ ಗಿಡಮೂಲಿಕೆಯನ್ನು ಬಳಸಿ ಈ ಔಷಧಿಯನ್ನು ತಯಾರಿಸಲಾಗಿದೆ. 2015ರಿಂದ ಔಷಧಿ ತಯಾರಿಕ ಕಾರ್ಯ ನಡೆದಿದ್ದು, ಮೆದಾಂತ ಆಸ್ಪತ್ರೆಯಲ್ಲಿ ಇದನ್ನು ಪರೀಕ್ಷೆಗೂ ಒಳಪಡಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.