ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಅಖಾಡ ಕರ್ನಾಟಕದಲ್ಲಿ ಇಂದು ಮೂರನೇ ಸುತ್ತಿನ ಪ್ರಚಾರ ಕಾರ್ಯವನ್ನು ನಡೆಸಲಿದ್ದು, 4 ಸಮಾವೇಶಗಳನ್ನು ನಡೆಸಲಿದ್ದಾರೆ.
ಬೆಳಗ್ಗೆ 11ಗಂಟೆಗೆ ತುಮಕೂರಿಗೆ ಆಗಮಿಸಲಿರುವ ಅವರು, ತುಮಕೂರು, ಹಾಸನ ಮತ್ತು ನೆಲಮಂಗಳ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಲಿದ್ದಾರೆ.
ಮಧ್ಯಾಹ್ನ 2 ಗಂಟೆಗೆ ಗದಗ ಜಿಲ್ಲೆಯ ಮುಂಡರಗಿಗೆ ಆಗಮಿಸಲಿರುವ ಅವರು ಅಲ್ಲಿನ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಸಂಜೆ 3 ಗಂಟೆಗೆ ಶಿವಮೊಗ್ಗ ನಗರದ ಎನ್ಇಎಸ್ ಮೈದಾನದಲ್ಲಿ ಸಮಾವೇಶ ನಡೆಸಲಿದ್ದಾರೆ.
ಸಂಜೆ 6.30ರ ಸುಮಾರಿಗೆ ಮಂಗಳೂರಿನ ಕೇಂದ್ರ ಮೈದಾನದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಸಮಾವೇಶ ನಡೆಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.