ನವದೆಹಲಿ: ಬೌದ್ಧಿಕ ಆಸ್ತಿ(ಐಪಿ)ಗೆ ಸಂಬಂಧಿಸಿದ ಅಪರಾಧಗಳ ವಿರುದ್ಧ ಹೋರಾಡಲು ಸರ್ಕಾರ ಮತ್ತು ತನಿಖಾ ಏಜೆನ್ಸಿಗಳಿಗೆ ಸಹಾಯ ಮಾಡಬಲ್ಲ ಇಂಟೆಲೆಕ್ಚುವಲ್ ಪ್ರಾಪರ್ಟಿ(ಐಪಿ)ಮಸ್ಕಾಟ್-ಐಪಿ ನಾನಿಯನ್ನು ಕೇಂದ್ರ ಸಚಿವ ಸುರೇಶ್ ಪ್ರಭು ಅನಾವರಣಗೊಳಿಸಿದ್ದಾರೆ.
ರಾಷ್ಟ್ರೀಯ ಬೌದ್ಧಿಕ ಆಸ್ತಿ ಹಕ್ಕುಗಳ ನಿಯಮದ ಬಗ್ಗೆ ನಡೆದ ವಿಚಾರಸಂಕಿರಣದಲ್ಲಿ ಐಪಿ-ನಾನಿಯನ್ನು ಅನಾವರಣಗೊಳಿಸಲಾಯಿತು. ಇದೇ ವೇಳೆ ನಟ ಅಮಿತಾಭ್ ಬಚ್ಚನ್ ಅವರನ್ನೊಳಗೊಂಡ ಪೈರಸಿ ವಿರುದ್ಧದ ವೀಡಿಯೋವನ್ನು ಪ್ರದರ್ಶಿಸಲಾಯಿತು.
ಜ್ಞಾನ ಆಧಾರಿತ ಸಮಾಜದ ನಿರ್ಮಾಣಕ್ಕೆ ಬೌದ್ಧಿಕ ಆಸ್ತಿ ಹಕ್ಕನ್ನು ರಕ್ಷಣೆ ಮಾಡುವುದು ಅತ್ಯಗತ್ಯವಾಗಿದೆ. ಕಾನೂನನ್ನು ಸಮಪರ್ಕವಾಗಿ ಅನುಷ್ಠಾನಕ್ಕೆ ತಂದು ಈ ಹಕ್ಕನ್ನು ರಕ್ಷಿಸಬೇಕಾಗಿದೆ. ಪೈರಸಿ ಒಂದು ಗಂಭೀರ ಅಪರಾಧವಾಗಿದ್ದು, ಅಪರಾಧಿಗಳು ಶಿಕ್ಷೆಗೊಳಗಾಗದೆ ಪಾರಾಗಬಾರದು ಎಂದು ಈ ವೇಳೆ ಸಚಿವರು ಪ್ರತಿಪಾದಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.