ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಬಿಎಸ್ ಯಡಿಯೂರಪ್ಪನವರು, ನಾಡಿನ ಜನತೆಗೆ ಧನ್ಯವಾದಗಳನ್ನು ತಿಳಿಸಿದ್ದು, ರಾಜ್ಯವನ್ನು ಪ್ರಗತಿ ಪಥದತ್ತ ಕೊಂಡೊಯ್ಯವ ಹೊಣೆ ನನ್ನದು ಎಂದಿದ್ದಾರೆ.
ಟ್ವಿಟ್ ಮಾಡಿರುವ ಅವರು, ‘ಕರ್ನಾಟಕದ ಸಿಎಂ ಆಗಿ ರೈತರ ಹೆಸರಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ದೇನೆ. ರಾಜ್ಯದಲ್ಲಿ ಅಭಿವೃದ್ಧಿ ಪರವಾದ ಬಿಜೆಪಿ ಆಡಳಿತ ಆರಂಭಗೊಂಡಿದೆ. ನಾಡಿನ ಸರ್ವಾಂಗೀಣ ಅಭಿವೃದ್ಧಿಗೆ ಕಾರ್ಯೋನ್ಮುಖನಾಗಿದ್ದೇನೆ’ ಎಂದಿದ್ದಾರೆ.
ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸಿದ ಎಲ್ಲಾ ಕಾರ್ಯಕರ್ತರಿಗೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಧನ್ಯವಾದಗಳು, ನನ್ನ ಮೇಲೆ ನಂಬಿಕೆ ಇಟ್ಟು ಸಿಎಂ ಹುದ್ದೆಗೇರಿಸಿದ ಪ್ರಧಾನಿಯವರಿಗೂ ಧನ್ಯವಾದ ಎಂದಿದ್ದಾರೆ.
ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸಿದ ಪಕ್ಷದ ಎಲ್ಲ ಕಾರ್ಯಕರ್ತರಿಗೆ ಹಾಗೂ ನಾಯಕರಿಗೆ ಮತ್ತೊಮ್ಮೆ ಧನ್ಯವಾದಗಳು. ನನ್ನ ಮೇಲೆ ನಂಬಿಕೆಯನ್ನಿಟ್ಟು ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಮಾಡಿದ ಪ್ರಧಾನಿ ಶ್ರೀ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಶ್ರೀ ಅಮಿತ್ ಶಾ ಹಾಗೂ ಪಕ್ಷದ ಎಲ್ಲ ಶಾಸಕರಿಗೆ ಹೃತ್ಪೂರ್ವಕ ಕೃತಜ್ಞತೆಗಳು.
— B.S. Yeddyurappa (@BSYBJP) May 17, 2018
ಕರ್ನಾಟಕದ ಮುಖ್ಯಮಂತ್ರಿಯಾಗಿ ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದೇನೆ. ನೀವು ನಮ್ಮ ಮೇಲೆ ವಿಶ್ವಾಸವಿಟ್ಟು ಮತ ಚಲಾಯಿಸಿದ್ದರಿಂದ ಇದು ಸಾಧ್ಯವಾಗಿದೆ. ರಾಜ್ಯವು ಪ್ರಗತಿಪಥದಲ್ಲಿ ಸಾಗಬೇಕೆಂಬ ನಿಮ್ಮ ಆಕಾಂಕ್ಷೆಯನ್ನು ನಿಜ ಮಾಡುವುದು ನಮ್ಮ ಹೊಣೆ. ಎಂದಿನಂತೆ ನಮ್ಮ ಜೊತೆಗಿರಿ. ನಿಮ್ಮ ಕನಸುಗಳನ್ನು ನನಸಾಗಿಸುತ್ತೇವೆ. ಧನ್ಯವಾದಗಳು. pic.twitter.com/js75wQpnsD
— B.S. Yeddyurappa (@BSYBJP) May 17, 2018
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.