ಬೆಂಗಳೂರು: ಬಿಜೆಪಿಯ ಬಿಎಸ್ ಯಡಿಯೂರಪ್ಪನವರಿಗೆ ಶನಿವಾರವೇ ವಿಶ್ವಾಸಮತಯಾಚನೆ ಮಾಡುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ.
ಮೂವರು ನ್ಯಾಯಾಧೀಶರನ್ನೊಳಗೊಂಡ ವಿಶೇಷ ನ್ಯಾಯಪೀಠ, ಯಡಿಯೂರಪ್ಪನವರಿಗೆ ಸರ್ಕಾರ ರಚಿಸಲು ಆಹ್ವಾನ ನೀಡಿದ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ ಮನವಿಯನ್ನು ಇಂದು ವಿಚಾರಣೆಗೊಳಪಡಿಸಿತು.
ಈ ವೇಳೆ ವಿಶ್ವಾಸಮತಯಾಚನೆಗೆ ನಾಳೆಯೇ ದಿನಾಂಕ ನಿಗದಿಪಡಿಸಬೇಕೆ ಅಥವಾ ರಾಜ್ಯಪಾಲರ ನಿರ್ಧಾರವನ್ನು ವಿಚಾರಣೆಗೆ ಒಳಪಡಿಸಬೇಕೆ ಎಂಬ ಆಯ್ಕೆಯನ್ನು ಸುಪ್ರೀಂಕೋರ್ಟ್ ಕಾಂಗ್ರೆಸ್-ಜೆಡಿಎಸ್ ಮುಂದಿಟ್ಟಿದೆ.
ಇದಕ್ಕೆ ನಾವು ನಾಳೆಯೇ ವಿಶ್ವಾಸಮತಯಾಚನೆಗೆ ಸಿದ್ಧ ಎಂದು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸ್ಪಷ್ಟಪಡಿಸಿದೆ.
ಬಿಜೆಪಿ ಕೂಡ ನಾಳೆಯೇ ವಿಶ್ವಾಸಮತಯಾಚನೆಗೆ ಸಿದ್ಧ ಎಂದು ಒಪ್ಪಿಕೊಂಡಿದೆ.
ಎಲ್ಲಾ ಶಾಸಕರು ಸದನದೊಳಗೆ ಹಾಜರಿರಬೇಕು ಎಂದು ಸುಪ್ರೀಂ ಸೂಚಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.