ಲಕ್ನೋ: ಉತ್ತರಪ್ರದೇಶದ ಸುಮಾರು 12 ಮಂದಿ ಶಾಸಕರಿಗೆ, ಅದರಲ್ಲೂ ಬಹುತೇಕ ಬಿಜೆಪಿ ಶಾಸಕರಿಗೆ ಬೆದರಿಕೆ ಕರೆಗಳು ಬಂದಿದ್ದು, ಈ ಪ್ರಕರಣವನ್ನು ಎಸ್ಐಟಿ ತನಿಖೆಗೆ ಒಳಪಡಿಸಲು ಸಿಎಂ ಯೋಗಿ ಆದಿತ್ಯನಾಥ ಅವರು ನಿರ್ಧರಿಸಿದ್ದಾರೆ.
ಫೋನ್ ಕರೆ ಮತ್ತು ವಾಟ್ಸಾಪ್ ಮೆಸೇಜ್ ಮೂಲಕ 12 ಶಾಸಕರಿಗೆ 10 ಲಕ್ಷ ರೂಪಾಯಿಗಳ ಬೇಡಿಕೆ ಇಡಲಾಗಿದ್ದು, ಈ ಮೊತ್ತದ ಹಣ ನೀಡಿಲ್ಲವಾದರೆ ತಕ್ಕ ಪರಿಣಾಮವನ್ನು ಎದುರಿಸಬೇಕಾಗುತ್ತದೆ, ಮೂರು ದಿನಗಳ ಒಳಗೆ ನಿಮ್ಮ ಕುಟುಂಬ ಸದಸ್ಯರನ್ನು ಕೊಲೆ ಮಾಡಲಾಗುತ್ತದೆ ಎಂದು ಬೆದರಿಕೆಯೊಡ್ಡಲಾಗಿದೆ.
ಈ ಹಿಂದೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಜೊತೆ ಇದ್ದ, ಪ್ರಸ್ತುತ ಪಾಕಿಸ್ಥಾನದಲ್ಲಿ ತಲೆಮರಿಸಿಕೊಂಡಿರುವ ಗ್ಯಾಂಗ್ಸ್ಟರ್ವೊಬ್ಬನ ಹೆಸರಿನಲ್ಲಿ ಈ ಬೆದರಿಕೆ ಕರೆಗಳು ಬಂದಿವೆ.
ಘಟನೆಯ ಬಗ್ಗೆ ಸ್ವಯಂಪ್ರೇರಣೆಯಿಂದ ತನಿಖೆಗೆ ಆದೇಶಿಸಿರುವ ಯೋಗಿ, ಪೊಲೀಸ್ ಇಲಾಖೆಗೆ ಎಸ್ಐಟಿ ರಚನೆ ಮಾಡುವಂತೆ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.