News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಲ್ಲಡ್ಕ :  ದಿನಾಂಕ 5-6-2018 ರಂದು ಶ್ರೀರಾಮ ಪ್ರೌಢಶಾಲಾ ವಿಭಾಗದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್‍ಯಕ್ರಮ ನೆರವೇರಿತು. ಕಾರ್‍ಯಕ್ರಮದ ಅಧ್ಯಕ್ಷತೆ ವಹಿಸಿದ ವಿದ್ಯಾಕೇಂದ್ರದ ಸಂಚಾಲಕರಾದ ಶ್ರೀ ವಸಂತ ಮಾಧವ ಮಾತನಾಡಿ ಪರಿಸರದ ಸೊಬಗನ್ನು ಕೇವಲ ಆಸ್ವಾದಿಸಿ ಸಂತೋಷ ಪಡುವುದರ ಜೊತೆ ಪ್ರತಿಯೊಬ್ಬನೂ ಪರಿಸರ ಉಳಿಸಿ ಬೆಳೆಸುವ ಕಾರ್‍ಯವನ್ನು ನಡೆಸಬೇಕು. ಸ್ವಚ್ಛ ಪರಿಸರವನ್ನು ಕಾಪಾಡಿ ಉತ್ತಮ ಆರೋಗ್ಯ ಪಡೆಯಬೇಕು ಎಂದು ತಿಳಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಡಾ| ಪ್ರಭಾಕರ ಭಟ್‌ ಇವರು ವಿದ್ಯಾಕೇಂದ್ರದ ಕೇಂದ್ರ ಕಚೇರಿ ರಾಜೇಂದ್ರದ ಸೌಧದ ಪಕ್ಕದಲ್ಲಿ ಗಿಡ ನೆಡುವ ಮೂಲಕ ಕಾರ್‍ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಶ್ರೀ ವಿಶ್ವನಾಥ ಪ್ರಭು, ಅಧ್ಯಕ್ಷರು ಪ್ರೌಢಶಾಲಾ ಶಾಲಾಭಿವೃದ್ಧಿ ಸಮಿತಿ, ಶ್ರೀಮತಿ ವಸಂತಿ, ಮುಖ್ಯ ಶಿಕ್ಷಕರು, ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್‍ಯಕ್ರಮದಲ್ಲಿ ಶ್ರೀ ರಕ್ಷಾ,  ದುರ್ಗಾವತಿ ಸ್ವಾಗತಿಸಿ, ಶಿಪಾಲಿ ಭರತ ವಂದಿಸಿ, ಸುಶ್ಮಿತಾ  ಭರತ ನಿರೂಪಿಸಿದಳು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top