ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಜಮ್ಮು ಕಾಶ್ಮೀರದ ಅದೃಷ್ಟ ಮತ್ತು ಸ್ಥಿತಿಯನ್ನು ಬದಲಾಯಿಸುತ್ತಾರೆ, ಆದರೆ ಇಲ್ಲಿ ಯುವ ಜನಾಂಗ ತಮ್ಮ ಸ್ವಂತ ಅದೃಷ್ಟವನ್ನು ಬದಲಾಯಿಸುವತ್ತ ಕಾರ್ಯೋನ್ಮುಖವಾಗಬೇಕಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಎರಡು ದಿನಗಳ ಜಮ್ಮು ಕಾಶ್ಮೀರ ಪ್ರವಾಸದಲ್ಲಿರುವ ಅವರು, ಅಲ್ಲಿನ ಕಾನೂನು ಸುವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಅಧಿಕಾರಿಗಳಿಂದ ಸ್ಥಿತಿಗತಿಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ.
ಶ್ರೀನಗರದಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಕಾಶ್ಮೀರದ ಬಗ್ಗೆ ಸಾಕಷ್ಟು ಪ್ರೀತಿಯಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಒದಗಿಸುತ್ತಿರುವ ಅವಕಾಶಗಳನ್ನು ಇಲ್ಲಿನ ಜನರು ಸದುಪಯೋಗಪಡಿಸಿಕೊಳ್ಳಬೇಕಿದೆ ಎಂದರು.
ಇಲ್ಲಿನ ಹಲವಾರು ಕ್ರೀಡಾ ಪ್ರತಿಭೆಗಳು ಹಲವಾರು ವರ್ಷದಿಂದ ಕತ್ತಲಲ್ಲೇ ಇದ್ದವು, ಇತ್ತೀಚಿಗೆ ಅವರಿಗೆ ಅವಕಾಶಗಳು ದೊರೆಯುವಂತೆ ನಾವು ಮಾಡುತ್ತಿದ್ದೇವೆ. ಇಲ್ಲಿನ ಯುವ ಜನಾಂಗ ಕ್ರೀಡೆಯ ಅದ್ಭುತದಿಂದ, ಶಿಕ್ಷಣದಿಂದ, ಶಕ್ತಿಯಿಂದ ಇಲ್ಲಿನ ಭವಿಷ್ಯವನ್ನು, ಅದೃಷ್ಟವನ್ನು ಬದಲಾಯಿಸಲಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.