ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಜೈಪುರದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಕಾಂಗ್ರೆಸ್ ಮೇಲೆ ಹರಿಹಾಯ್ದರು. ’ಕಾಂಗ್ರೆಸ್ ಮುಖಂಡರು ಬಿಜೆಪಿ ಆ ಕೆಲಸ ಮಾಡಿಲ್ಲ, ಈ ಕೆಲಸ ಮಾಡಿಲ್ಲ ಎಂದು ಟೀಕಿಸಿಸುತ್ತಿದ್ದಾರೆಯೇ ಹೊರತು ಭಾರತವನ್ನು ದಶಕಗಳ ಕಾಲ ಆಳಿದ ಅವರ ಮೂರು ತಲೆಮಾರುಗಳ ಲೆಕ್ಕವನ್ನು ನೀಡುತ್ತಿಲ್ಲ’ ಎಂದು ಅವರು ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಶಾ, ರಾಹುಲ್ ಗಾಂಧಿಯನ್ನು ಬಬುವಾ(ಮಗು) ಎಂದಿದ್ದಾರೆ.
ಕೇಂದ್ರ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ಅವರ ಜೈಪುರ ಗ್ರಾಮೀಣ ಲೋಕಸಭಾ ಕ್ಷೇತ್ರದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಶಾ, ಇಂದು ಅನೇಕ ರಾಜ್ಯಗಳಲ್ಲಿ ಅಧಿಕಾರವನ್ನು ಕಳೆದುಕೊಂಡು, ಕೇವಲ ಕೆಲ ಉಪಚುನಾವಣೆಗಳಲ್ಲಿ ಗೆಲುವು ಗಳಿಸಿ ಸಂತೋಷದಲ್ಲಿರುವ ವಿರೋಧ ಪಕ್ಷಗಳನ್ನು ಕಂಡು ’ಇಂತಹ ವಿರೋಧ ಪಕ್ಷವನ್ನು ಹೊಂದಿರುವುದು ಬಿಜೆಪಿಯ ಅದೃಷ್ಟವೇ ಹೌದು’ ಎಂದು ಅವರು ಹೇಳಿದ್ದಾರೆ.
ನಾವು 8 ಉಪಚುನಾವಣೆಗಳಲ್ಲಿ ಸೋತಿರಬಹುದು ಆದರೆ 14 ರಾಜ್ಯಗಳಲ್ಲಿ ಅವರಿಂದ(ವಿರೋಧ ಪಕ್ಷ ಕಾಂಗ್ರೆಸ್) ಅಧಿಕಾರವನ್ನು ಕಿತ್ತುಕೊಂಡಿದ್ದೇವೆ ಎಂದು ಶಾ ಹೇಳಿದ್ದಾರೆ.
’ಅರೇ ಬಬುವಾ(ರಾಹುಲ್ ಗಾಂಧಿಯನ್ನು ಉದ್ದೇಶಿಸಿ), ನೀವು 70 ವರ್ಷದ ಆಡಳಿತದಲ್ಲಿ ಏನು ಮಾಡಿದ್ದೀರಿ ಹೇಳಿ? ನೀವು ಸರಿಯಾಗಿ ಕೆಲಸ ಮಾಡಿದ್ದರೆ, ಇಂದು ನಮಗೆ ಶೌಚಾಲಯಗಳನ್ನು ಕಟ್ಟಿಸುವಂತಹ ಹಾಗೂ ಬಡ ತಾಯಂದಿರಿಗೆ ಸಿಲಿಂಡರ್ ಒದಗಿಸುವ ಅದೃಷ್ಟ ನಮ್ಮದಾಗುತ್ತಿರಲಿಲ್ಲ’ ಎಂದು ಅವರು ಹೇಳಿದರು.
ವಿಶ್ವದ ಅತ್ಯಂತ ಜನಪ್ರಿಯ ನಾಯಕ ನರೇಂದ್ರ ಮೋದಿ ನಮ್ಮ ದೇಶವನ್ನು ಮುನ್ನಡೆಸುತ್ತಿದ್ದಾರೆ, ಹಾಗೂ ಅವರ ನೇತೃತ್ವದಲ್ಲಿ ಭಾರತ ಮತ್ತೊಮ್ಮೆ ’ವಿಶ್ವ ಗುರು’ವಾಗಲಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.