ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಹೀನಾಯ ಸೋಲಾಗಿದೆ. ನರೇಂದ್ರ ಮೋದಿಯವರು ಬರೋಬ್ಬರಿ 199 ಮತಗಳ ಅಂತರದಿಂದ ವಿಶ್ವಾಸ ಮತವನ್ನು ಗೆದ್ದು ದಿಗ್ವಿಜಯ ಸಾಧಿಸಿದ್ದಾರೆ. ಈ ಮೂಲಕ ಅತಿಯಾದ ಆತ್ಮವಿಶ್ವಾಸ ಹೊಂದಿದ್ದ ಕಾಂಗ್ರೆಸ್ ಮತ್ತು ಅದರ ಮೈತ್ರಿಗಳಿಗೆ ತೀವ್ರ ಮುಖಭಂಗವನ್ನುಂಟು ಮಾಡಿದ್ದಾರೆ.
451 ಸದಸ್ಯ ಬಲದ ಲೋಕಸಭೆಯಲ್ಲಿ, 325 ಮತಗಳು ಮೋದಿ ಸರ್ಕಾರದ ಪರವಾಗಿ ಬಿದ್ದಿದೆ, ಕೇವಲ 126 ಮತಗಳು ಪ್ರತಿಪಕ್ಷಗಳ ಪರವಾಗಿ ಬಿದ್ದಿವೆ. ಸರ್ಕಾರಕ್ಕೆ ಗೆಲ್ಲಲು 226 ಮತಗಳು ಬೇಕಿತ್ತು.
ನಿರಂತರವಾಗಿ 12 ಗಂಟೆಗಳ ಕಾಲ ಅವಿಶ್ವಾಸ ನಿರ್ಣಯ ಮೇಲೆ ಚರ್ಚೆ ನಡೆದ ಬಳಿಕ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು, ಅವಿಶ್ವಾಸ ನಿರ್ಣಯ ಪ್ರಸ್ತಾಪವನ್ನು ಮತಕ್ಕೆ ಹಾಕಿದರು. ಬಟನ್ ಒತ್ತುವ ಮೂಲಕ ಸದಸ್ಯರು ತಮ್ಮ ಮತ ಚಲಾಯಿಸಿದರು.
ಎಐಎಡಿಎಂಕೆ, ಶಿವಸೇನೆ ಸರ್ಕಾರದ ಪರವಾಗಿ ಮತ ಹಾಕಿದವು, ಟಿಆರ್ಎಸ್, ಬಿಜೆಡಿ ಮತದಾನದಿಂದ ಹೊರಗುಳಿಯುವ ಮೂಲಕ ಪರೋಕ್ಷವಾಗಿ ಸರ್ಕಾರವನ್ನು ಬೆಂಬಲಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.