ನವದೆಹಲಿ: ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯ ವೇಳೆ ಸುಳ್ಳು ಹೇಳಿಕೆಗಳನ್ನು ನೀಡಿ ಸದನದ ದಾರಿ ತಪ್ಪಿಸುವ ಪ್ರಯತ್ನ ಮಾಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ಬಿಜೆಪಿ ಹಕ್ಕುಚ್ಯುತಿ ಮಂಡನೆಗೊಳಿಸಿದೆ.
ಪ್ರಧಾನಿ ನರೇಂದ್ರ ಮೋದಿಯವರ ಒತ್ತಡದ ಮೇರೆಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಫೆಲ್ ಒಪ್ಪಂದದ ಬಗ್ಗೆ ದೇಶಕ್ಕೆ ಸುಳ್ಳು ಹೇಳಿದ್ದಾರೆ, ನಾನು ಫ್ರಾನ್ಸ್ ಅಧ್ಯಕ್ಷರೊಂದಿಗೆ ಒಪ್ಪಂದದ ಬಗ್ಗೆ ಮಾತುಕತೆ ನಡೆಸಿದ್ದೇನೆ, ಅವರು ಈ ಒಪ್ಪಂದದಲ್ಲಿ ಯಾವುದೇ ಗೌಪ್ಯತೆ ಇಲ್ಲ ಎಂದಿದ್ದಾರೆ ಎಂದು ರಾಹುಲ್ ಅವರು ತಮ್ಮ ಭಾಷಣದ ವೇಳೆ ಹೇಳಿದ್ದರು.
ಆದರೆ ಬಳಿಕ ಪ್ರಕಟನೆ ಬಿಡುಗಡೆಗೊಳಿಸಿದ ಫ್ರಾನ್ಸ್, ರಾಹುಲ್ ಗಾಂಧಿ ತಮ್ಮೊಂದಿಗೆ ಮಾತುಕತೆಯನ್ನೇ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದೆ.
ಈ ಹಿನ್ನಲೆಯಲ್ಲಿ ರಾಹುಲ್ ವಿರುದ್ಧ ಬಿಜೆಪಿ ಹಕ್ಕುಚ್ಯುತಿ ಮಂಡನೆಗೊಳಿಸಿದೆ.
‘ರಾಹುಲ್ ಇನ್ನೂ ಬೆಳೆದಿಲ್ಲ, ಅಪ್ರಬುದ್ಧರಾಗಿಯೇ ಉಳಿದಿದ್ದಾರೆ. ತಪ್ಪು ಮಾಹಿತಿ ಹೊಂದಿದ್ದಾರೆ. ಸದನದ ಸದಸ್ಯರ ಬಗ್ಗೆ ಯಾವುದೇ ಆರೋಪ ಮಾಡುವುದಕ್ಕೂ ಮುಂಚಿತವಾಗಿ ಅವರು ನೋಟಿಸ್ ನೀಡಬೇಕು ಎಂಬ ಪದ್ಧತಿಯನ್ನು ಅನುಸರಿಸಿಲ್ಲ’ ಎಂದು ಕೇಂದ್ರ ಸಚಿವ ಅನಂತ್ಕುಮಾರ್ ಆರೋಪಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.