News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ವೆಂಕಟರಮಣ ದೇವರಿಗೆ ನೂತನ ರಜತ ತುಳಸಿ ಸಮರ್ಪಣೆ

ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಒಳ ಪ್ರಾಂಗಣದಲ್ಲಿರುವ ತುಳಸಿ ಕಟ್ಟೆಗೆ ಬೆಳ್ಳಿಯ ಹೊದಿಕೆಯನ್ನು ಗುರುಪುರ ಪೇಟೆ ಶೆಣೈ ಕುಟುಂಬದ ಪರವಾಗಿ ಶ್ರೀಮತಿ ಲಕ್ಷ್ಮೀದೇವಿ ಮತ್ತು ಗುರುಪುರ ಗುಂಡ ಯಾನೆ ದಾಮೋದರ ಶೆಣೈ ಮಂಗಳೂರು ಇವರ ಸ್ಮರಣಾರ್ಥ ಶ್ರೀಮತಿ ಲತಿಕಾ ಮತ್ತು ಲೆಕ್ಕ ಪರಿಶೋಧಕ ಗುರುಪುರ ಹರಿರಾಮ್ ಶೆಣೈ ಕುಟುಂಬದ ವತಿಯಿಂದ ಸೇವಾರೂಪದಲ್ಲಿ ಶ್ರೀ ದೇವರಿಗೆ ಸಮರ್ಪಿಸಲಾಯಿತು.

ಸಮರ್ಪಣಾ ಕಾರ್ಯಕ್ರಮದ ವೈದಿಕ ಪೂಜಾ ವಿಧಿವಿಧಾನಗಳನ್ನು ದೇವಳದ ಪಂಡಿತ್ ನರಸಿಂಹ ಆಚಾರ್ಯ ನೆರವೇರಿಸಿದರು. ದೇವಳದ ಮೊಕ್ತೇಸರರಾದ ಶ್ರೀಯುತ ಎಂ. ಪದ್ಮನಾಭ ಪೈ, ಜಯರಾಜ್ ಪೈ, ಅಡಿಗೆ ಕೃಷ್ಣ ಶೆಣೈ ಹಾಗೂ ನೂತನ ಮೊಕ್ತೇಸರರಾಗಿ ಆಯ್ಕೆಯಾದ ಸಿ. ಎಲ್. ಶೆಣೈ, ಕೆ. ಪಿ. ಪ್ರಶಾಂತ್ ರಾವ್, ರಾಮಚಂದ್ರ ಕಾಮತ್, ಪ್ರಧಾನ ಅರ್ಚಕರಾದ ಚಂದ್ರಕಾಂತ್ ಭಟ್, ಬೆಳ್ಳಿಯ ಕಸೂರಿ ಕೆಲಸ ಮಾಡಿದ ಕೆನರಾ ಜುವೆಲ್ಸ್ ಮಾಲಕರಾದ ಧನಂಜಯ ಪಾಲ್ಕೆ ಮತ್ತಿತರರು ಉಪಸ್ಥಿತರಿದ್ದರು.

ಚಿತ್ರ : ಮಂಜು ನೀರೇಶ್ವಾಲ್ಯ

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top