ನೊಯ್ಡಾ: ಉತ್ತರಪ್ರದೇಶದ ಯುವ ಜನತೆ ಅಪಾರ ಪ್ರಮಾಣದಲ್ಲಿ ಉದ್ಯೋಗವನ್ನು ಹರಸಿ ಬೇರೆಡೆಗೆ ವಲಸೆ ಹೋಗುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಉದ್ಯೋಗ ಸೃಷ್ಟಿಯತ್ತ ಗಮನಹರಿಸುವುದಾಗಿ ಸಿಎಂ ಯೋಗಿ ಆದಿತ್ಯನಾಥ ಹೇಳಿದ್ದಾರೆ.
ಗ್ರೇಟರ್ ನೊಯ್ಡಾದ ಗೌತಮ್ ಬುದ್ಧ ಯೂನಿವರ್ಸಿಟಿಯಲ್ಲಿ 2018-19ರ ಶೈಕ್ಷಣಿಕ ವರ್ಷಾರಂಭದ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದ್ದು, ಯುವ ಜನರಿಗೆ ಉದ್ಯೋಗ ನೀಡುವ ಭರವಸೆ ನೀಡಿದ್ದಾರೆ.
ಕಳೆದ ಒಂದು ವರ್ಷದಲ್ಲಿ ಯುಪಿ ಸರ್ಕಾರ ಸುಮಾರು 2.5 ಲಕ್ಷ ಜನರಿಗೆ ಉದ್ಯೋಗವನ್ನು ಕಲ್ಪಿಸಿಕೊಟ್ಟಿದೆ, ಮುಂಬರುವ ವರ್ಷಗಳಲ್ಲೂ ಇದೇ ಪ್ರಮಾಣದಲ್ಲಿ ಉದ್ಯೋಗಗಳನ್ನು ಸೃಷ್ಟಿಸುವುದಾಗಿ ಯೋಗಿ ಭರವಸೆ ನೀಡಿದ್ದಾರೆ.
‘ಸಾಂಪ್ರದಾಯಿಕವಾಗಿ ಒಂದಲ್ಲ ಒಂದು ರೀತಿಯ ತಜ್ಞತೆಯನ್ನು ಹೊಂದಿರುವ ಪ್ರದೇಶಗಳನ್ನು, ಜಿಲ್ಲೆಗಳನ್ನು ಹೊಂದಿರುವುದು ಉತ್ತರಪ್ರದೇಶದ ಅದೃಷ್ಟವಾಗಿದೆ, ಇದಕ್ಕಾಗಿ ನಾವು ‘ಒಂದು ಜಿಲ್ಲೆ, ಒಂದು ಉತ್ಪನ್ನ’ ಕಾರ್ಯಕ್ರಮವನ್ನು ಕಾರ್ಯರೂಪಕ್ಕೆ ತಂದಿದ್ದೇವೆ. ಈ ಕಾರ್ಯಕ್ರಮದಡಿ ಆಯಾ ಜಿಲ್ಲೆಯ ಯುವಕರು ತಮ್ಮ ಜಿಲ್ಲೆಯಲ್ಲೇ ಉದ್ಯೋಗ ಪಡೆಯುವ ಅವಕಾಶ ಸಿಗಲಿದೆ’ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.