ನವದೆಹಲಿ: ಜೈವಿಕ ಇಂಧನದ ಬಳಕೆ 21ನೇ ಶತಮಾನದ ಭಾರತಕ್ಕೆ ಹೊಸ ಶಕ್ತಿಯನ್ನು ತುಂಬಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ವಿಶ್ವ ಜೈವಿಕ ಇಂಧನ ದಿನದ ಅಂಗವಾಗಿ ದೆಹಲಿಯ ವಿಜ್ಞಾನ ಭವನದಲ್ಲಿ ರೈತರು, ವಿಜ್ಞಾನಿಗಳು, ವಿದ್ಯಾರ್ಥಿಗಳು, ಉದ್ಯಮಿಗಳು, ಸರ್ಕಾರಿ ಅಧಿಕಾರಿಗಳು, ಶಾಸಕರನ್ನು ಉದ್ದೇಶಿಸಿ ಅವರು ಮಾತನಾಡಿದರು.
ಜೈವಿಕ ಇಂಧನದಂತಹ ಪರಿಸರ ಸ್ನೇಹಿ ಇಂಧನದ ಬಳಕೆಯಿಂದ ಜನರ ಜೀವನ ಬದಲಾಗಲಿದೆ ಎಂದು ಅಭಿಪ್ರಾಯಿಸಿರುವ ಅವರು, ಇದರ ಬಳಕೆಯಿಂದ ದೇಶದಲ್ಲಿ ಹೆಚ್ಚಿನ ಉದ್ಯೋಗವಕಾಶಗಳೂ ಸೃಷ್ಟಿಯಾಗಲಿದೆ ಎಂದಿದ್ದಾರೆ.
ಬೆಳೆಗಳ ತ್ಯಾಜ್ಯದಿಂದ ತಯಾರಾಗುವುದೇ ಜೈವಿಕ ಇಂಧನ, ಜೈವಿಕ ಇಂಧನ ಎಂಬುದು ಕೇವಲ ವಿಜ್ಞಾನವಲ್ಲ, ಅದು 21ನೇ ಶತಮಾನದ ಭಾರತಕ್ಕೆ ನೀಡುವ ಹೊಸ ಶಕ್ತಿಯ ಮಂತ್ರ ಎಂದರು.
ಜೈವಿಕ ಇಂಧನ ಉದ್ಯೋಗವಕಾಶ ಸೃಷ್ಟಿಸುತ್ತದೆ, ವಿದೇಶಿ ವಿನಿಮಯದಲ್ಲಿ ಉಳಿತಾಯ ಮಾಡುತ್ತದೆ, ಪರಿಸರಕ್ಕೆ ಹಾನಿ ಮಾಡುವುದಿಲ್ಲ ಮತ್ತು ರೈತರ ಆದಾಯವನ್ನು ಹೆಚ್ಚುಗೊಳಿಸಲಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.