ತಿರುವನಂತಪುರ: ಪ್ರವಾಹದಿಂದ ತತ್ತರಿಸಿ ಹೋಗಿರುವ ಕೇರಳದಲ್ಲಿ ಈಗಾಗಲೇ 36 ಜನರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಅಪಾರ ಸಂಖ್ಯೆಯ ಮನೆಗಳು ಸಂಪೂರ್ಣವಾಗಿ ಹಾನಿಗೊಳಗಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಸಿಬ್ಬಂದಿ ಹಗಲು ರಾತ್ರಿ ಎನ್ನದೆ ಜನರ ರಕ್ಷಣಾ ಕಾರ್ಯದಲ್ಲಿ ಮಗ್ನರಾಗಿದ್ದಾರೆ.
ಇಡುಕ್ಕಿ ಡ್ಯಾಂನಲ್ಲಿ ನೀರು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದ್ದು, ಜನರಲ್ಲಿ ಹೆಚ್ಚಿನ ಆತಂಕವನ್ನು ಸೃಷ್ಟಸಿದೆ. ಅನಾರೋಗ್ಯ ಪೀಡಿತ ಮಗುವನ್ನು ಎದೆಗೆ ಅವಚಿಕೊಂಡು ಎನ್ಡಿಆರ್ಎಫ್ ಸಿಬ್ಬಂದಿಯೊಬ್ಬರು ಓಡುತ್ತಿರುವ ದೃಶ್ಯ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಜನಮನ್ನಣೆಯನ್ನು ಗಳಿಸಿದೆ. ತಂದೆಯೊಬ್ಬರು ಇಡುಕ್ಕಿ ಡ್ಯಾಂಗೆ ಸಮೀಪದ ಚೆರುತೊನಿ ಬ್ರಿಡ್ಜ್ನಲ್ಲಿ ಮಗುವನ್ನು ಹಿಡಿದು ರಕ್ಷಣೆಗಾಗಿ ಅಂಗಾಚುತ್ತಿದ್ದ ವೇಳೆ ಎನ್ಡಿಆರ್ಎಫ್ನ ಕನ್ಹಯ್ಯ ಕುಮಾರ್ ತಕ್ಷಣ ಅಲ್ಲಿಗೆ ಧಾವಿಸಿ ಬ್ರಿಡ್ಜ್ಗೆ ನೀರು ಅಪ್ಪಳಿಸುವ ಮುನ್ನ ಮಗುವನ್ನು ಹಿಡಿದು ಓಡಿ ಇನ್ನೊಂದು ತುದಿಯ ಸುರಕ್ಷಿತ ಪ್ರದೇಶಕ್ಕೆ ತಲುಪಿಸಿದ್ದಾರೆ.
ಕೇಂದ್ರವು ಕೇರಳದ ನೆರೆ ಪರಿಸ್ಥಿತಿ ಗಂಭೀರ ಸ್ಥಿತಿಯಲ್ಲಿದೆ ಎಂದಿದ್ದು, ಅಗತ್ಯ ನೆರವುಗಳನ್ನು ಒದಗಿಸುತ್ತಿದೆ. ಗೃಹ ಸಚಿವ ರಾಜನಾಥ್ ಸಿಂಗ್ ಅವರು ಹಲವು ಭಾಗಗಳಲ್ಲಿ ವೈಮಾನಿಕ ಸಮೀಕ್ಷೆಯನ್ನೂ ನಡೆಸಿದ್ದಾರೆ. ನೆರೆಯಿಂದ ಕೇರಳಕ್ಕೆ ರೂ.8316ಕೋಟಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. 2 ಸಾವಿರ ಮನೆಗಳು ಧ್ವಂಸವಾಗಿದ್ದು, 10 ಸಾವಿರ ಕಿಲೋಮೀಟರ್ ರಸ್ತೆಗಳು ಹಾನಿಗೊಳಗಾಗಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.