ನವದೆಹಲಿ: ಪ್ರವಾಹ ಪೀಡಿತ ಕೇರಳಕ್ಕೆ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ 500 ಕೋಟಿ ರೂಪಾಯಿಗಳ ಕೇಂದ್ರ ನೆರವು ಮತ್ತು ಪ್ರವಾಹ ಪೀಡಿತ ಕೇರಳಕ್ಕೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಘೋಷಿಸಿದ 100 ಕೋಟಿ ರೂ. ಇಂದು ಕೇರಳ ಸರ್ಕಾರಕ್ಕೆ ಬಿಡುಗಡೆ ಮಾಡಲಾಗಿದೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಕೇರಳದ ಪ್ರವಾಹ ಪೀಡಿತ ಪ್ರದೇಶಗಳಿಗೆ ರವಾನೆಯಾಗುವ ಪರಿಹಾರ ಸಾಮಗ್ರಿಗಳ ಮೇಲಿನ ರಾಜ್ಯ ಸರಕು ತೆರಿಗೆ(ಐಜಿಎಸ್ಟಿ)ಯನ್ನು ತೆಗೆದುಹಾಕಿದೆ. ಕೇರಳ ರಾಜ್ಯ ಸರ್ಕಾರದ ವಿನಂತಿಯ ಮೇರೆಗೆ ಆಹಾರ ಮತ್ತು ಸಾರ್ವಜನಿಕ ಇಲಾಖೆ ವತಿಯಿಂದ ಹೆಚ್ಚುವರಿ 89,540 ಮೆಟ್ರಿಕ್ ಟನ್ ಅಕ್ಕಿಯನ್ನು ಹಂಚಲಾಗಿದೆ. ಗ್ರಾಹಕರ ವ್ಯವಹಾರ ಇಲಾಖೆಯಿಂದ 100 ಮೆಟ್ರಿಕ್ ಟನ್ ಧಾನ್ಯಗಳನ್ನು ಕಳುಹಿಸಿಕೊಡಲಾಗಿತ್ತು ಮತ್ತೆ ಹೆಚ್ಚುವರಿಯಾಗಿ ಹೆಸರು ಹಾಗೂ ತೊಗರೆ ಬೇಳೆ ಧಾನ್ಯವನ್ನು ನೀಡಲಾಗುತ್ತಿದೆ.
ನೆರೆಯಿಂದ ಹಾನಿಗೊಳಗಾಗಿರುವ ಕೇರಳಕ್ಕೆ, ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳಿಂದ ರೂ. 25 ಕೋಟಿ ನೆರವು, ಪೆಟ್ರೋಲಿಯಂ ಸಚಿವಾಲಯದಿಂದ 3.2 ಲಕ್ಷ ಎಲ್ಪಿಜಿ ಸಿಲಿಂಡರ್ ಮತ್ತು 2.2 ಲಕ್ಷ ರೆಗ್ಯುಲೇಟರ್ಗಳನ್ನು ನೀಡಲಾಗಿದೆ. ರೈಲ್ವೆ ಇಲಾಖೆಯಿಂದ 24 ಲಕ್ಷ ಲೀಟರ್ ಹೆಚ್ಚುವರಿ 2.7 ಲಕ್ಷ ನೀರಿನ ಬಾಟಲ್ಗಳನ್ನು ಒದಗಿಸಲಾಗಿದೆ.
ಕ್ಯಾಬಿನೆಟ್ ಕಾರ್ಯದರ್ಶಿ ಪಿ.ಕೆ ಸಿನ್ಹಾ ಅವರ ನೇತೃತ್ವದ ಎನ್ಸಿಎಮ್ಸಿ ಸಭೆಯಲ್ಲಿ ಕೇಂದ್ರ ಗೃಹ ಸಚಿವಾಲಯ, ಆರೋಗ್ಯ, ಟೆಲಿಕಾಂ, ಗ್ರಾಹಕರ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ಇಲಾಖೆ, ವಿದ್ಯುತ್, ಪೆಟ್ರೋಲಿಯಂ ಮತ್ತು ನೈಸರ್ಗಿಕ ತೈಲ, ವಾಣಿಜ್ಯ ಮತ್ತು ಜವಳಿ ಹಾಗೂ ರಕ್ಷಣಾ ಪಡೆಯ ಹಿರಿಯ ಅಧಿಕಾರಿಗಳು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿ/ಕಾರ್ಯದರ್ಶಿಗಳು ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.