ಹನೋಯ್: ಹಿಂದೂ ಮಹಾಸಾಗರದಲ್ಲಿನ ಶಾಂತಿ ಭಾರತದ ವಿದೇಶಾಂಗ ನೀತಿಯ ಪ್ರಮುಖ ಆದ್ಯತೆಯಾಗಿದೆ ಎಂದು ವಿಯೆಟ್ನಾಂನ ಹನೋಯ್ನಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಒತ್ತಿ ಹೇಳಿದ್ದಾರೆ.
ಹಿಂದೂ ಮಹಾಸಾಗರದ ಆರ್ಥಿಕ ಪ್ರಾಮುಖ್ಯತೆಯನ್ನು ಸಾರಿದ ಅವರು, ಈ ಭಾಗದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಪೋಷಿಸುವುದಕ್ಕೆ ಭಾರತ ಪ್ರಮುಖ ಆದ್ಯತೆ ನೀಡುತ್ತದೆ ಎಂದಿದ್ದಾರೆ.
ಹಿಂದೂ ಮಹಾಸಾಗರದತ್ತ ಚೀನಾ ತನ್ನ ಹೆಜ್ಜೆ ಗುರುತು ಇಡಲು ಪ್ರಯತ್ನಿಸುತ್ತಿರುವ ಈ ಸಂದರ್ಭದಲ್ಲಿ ಸುಷ್ಮಾ ಅವರ ಹೇಳಿಕೆ ಅತ್ಯಂತ ಮಹತ್ವ ಪಡೆದುಕೊಂಡಿದೆ. ಚೀನಾದ ‘ಒನ್ ಬೆಲ್ಟ್, ಒನ್ ರೋಡ್’ ಯೋಜನೆಯನ್ನು ಭಾರತ ಬಲವಾಗಿ ವಿರೋಧಿಸುತ್ತಾ ಬಂದಿದೆ.
’ಉದಯವಾಗುತ್ತಿರುವ ಏಷ್ಯಾ ಯುಗದ ಪ್ರಮುಖ ಕೇಂದ್ರ ಹಿಂದೂ ಮಹಾಸಾಗರ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ, ಈ ಪ್ರದೇಶದ ವಿಶ್ವದ ಅತ್ಯಂತ ಜನನಿಬಿಡ ವಾಟರ್ವೇನ ಸೂತ್ರದಾರನಾಗಲಿದೆ’ ಎಂದು ಸುಷ್ಮಾ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.