ಅಹ್ಮದಾಬಾದ್: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕ ರಂದೀಪ್ ಸಿಂಗ್ ಸರ್ಜೇವಾಲ ವಿರುದ್ಧ ಅಹ್ಮದಾಬಾದ್ ಜಿಲ್ಲಾ ಸಹಕಾರಿ ಬ್ಯಾಂಕ್, ಸ್ಥಳಿಯ ನ್ಯಾಯಾಲಯದಲ್ಲಿ ಅಪರಾಧ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದೆ.
ನೋಟ್ ಬ್ಯಾನ್ ಸಂದರ್ಭದಲ್ಲಿ ಈ ಬ್ಯಾಂಕ್ ಸುಮಾರು ರೂ.750 ಕೋಟಿಯನ್ನು 5 ದಿನಗಳಲ್ಲಿ ಬದಲಾಯಿಸಿಕೊಡುವ ಮೂಲಕ ದೊಡ್ಡ ಮಟ್ಟದ ಹಗರಣ ನಡೆಸಿದೆ ಎಂದು ರಾಹುಲ್ ಮತ್ತು ರಂದೀಪ್ ಆರೋಪಿಸಿದ್ದರು.
ಈ ಆರೋಪವನ್ನು ಗಂಭೀರವಾಗಿ ಪರಿಗಣಿಸಿರುವ ಬ್ಯಾಂಕ್, ಈ ಇಬ್ಬರು ಕಾಂಗ್ರೆಸ್ ಮುಖಂಡರ ವಿರುದ್ಧ ಸ್ಥಳಿಯ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆಯನ್ನು ದಾಖಲು ಮಾಡಿದೆ.
ಇವರ ಆರೋಪದಲ್ಲಿ ಯಾವುದೇ ಸತ್ಯಾಂಶ ಇಲ್ಲ, ಬ್ಯಾಂಕ್ ಘನತೆಗೆ ಕುಂದು ತರಲು ಈ ಹೇಳಿಕೆ ನೀಡಲಾಗಿದೆ ಎಂದು ಬ್ಯಾಂಕ್ ಆರೋಪಿಸಿದೆ.
ಸೆ.17ರಂದು ಈ ಪ್ರಕರಣದ ಬಗ್ಗೆ ವಿಚಾರಣೆಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಕೈಗೆತ್ತಿಕೊಳ್ಳಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.