ಲಕ್ನೋ: ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯ ಪ್ರಯೋಜನ ಉತ್ತರಪ್ರದೇಶದ 1.8 ಕೋಟಿ ಕುಟುಂಬಗಳಿಗೆ ಸಿಗಲಿದೆ ಎಂದು ಅಲ್ಲಿನ ಆರೋಗ್ಯ ಸಚಿವ ಸಿದ್ಧಾರ್ಥ್ ನಾಥ್ ಸಿಂಗ್ ಹೇಳಿದ್ದಾರೆ.
ದೇಶದ 10 ಕೋಟಿ ಕುಟುಂಬಗಳಿಗೆ ವಾರ್ಷಿಕ 5 ಲಕ್ಷ ರೂಪಾಯಿಗಳ ವಿಮೆಯನ್ನು ನೀಡುವ ಯೋಜನೆ ಇದಾಗಿದ್ದು, ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಇದರ ಅನುಷ್ಠಾನವನ್ನು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದರು.
ಉತ್ತರಪ್ರದೇಶ ಸರ್ಕಾರ 2011ರ ಜನಗಣತಿಯಲ್ಲಿ ಬಿಟ್ಟು ಹೋದ ಬಡ ಕುಟುಂಬಗಳಿಗೂ ಕೇಂದ್ರದ ಈ ಯೋಜನೆಯನ್ನು ವಿಸ್ತರಿಸಲು ನಿರ್ಧಾರ ಮಾಡಿದೆ. ಇದಕ್ಕಾಗಿ ಸಮೀಕ್ಷೆಯೊಂದನ್ನು ಈಗ ಅದು ಆರಂಭಿಸಿದೆ.
ಲೇಸರ್ ಶಸ್ತ್ರಚಿಕಿತ್ಸೆ ಮತ್ತು ಡೆಂಟಲ್ ಚಿಕಿತ್ಸೆಯಂತಹ ಡೇ ಕೇರ್ಗೂ ಈ ವ್ಯವಸ್ಥೆಯನ್ನು ವಿಸ್ತರಿಸಲು ಯುಪಿ ಸರ್ಕಾರ ನಿರ್ಧರಿಸಿದೆ ಎಂದು ಸಿದ್ಧಾರ್ಥ್ ನಾಥ್ ಸಿಂಗ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.