ನವದೆಹಲಿ: ಕೇಂದ್ರ ಗೃಹ ಸಚಿವಾಲಯ ರಚನೆ ಮಾಡಿರುವ ‘ಭಾರತ್ ಕೆ ವೀರ್’ ಟ್ರಸ್ಟ್ನಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್, ರಾಷ್ಟ್ರೀಯ ಬ್ಯಾಡ್ಮಿಂಟನ್ ಕೋಚ್ ಪುಲ್ಲೇಲಾ ಗೋಪಿಚಂದ್ ಸೇರಿದಂತೆ 7 ಮಂದಿ ಟ್ರಸ್ಟಿಗಳು ಇರಲಿದ್ದಾರೆ.
ಗೃಹ ಸಚಿವ ರಾಜನಾಥ್ ಸಿಂಗ್ ಅವರು ಈ ವಿಷಯವನ್ನು ಟ್ವಿಟರ್ನಲ್ಲಿ ಬಹಿರಂಗಪಡಿಸಿದ್ದು, ಟ್ರಸ್ಟ್ನ್ನು ನೋಂದಾವಣಿ ಮಾಡಲಾಗಿದೆ ಎಂದು ಘೋಷಿಸಿದ್ದಾರೆ.
ಗೃಹ ಕಾರ್ಯದರ್ಶಿ ಅವರ ನೇತೃತ್ವದಲ್ಲಿ 7 ಮಂದಿ ಟ್ರಸ್ಟಿಗಳು ಇರಲಿದ್ದಾರೆ. ಟ್ರಸ್ಟ್ನ್ನು ವಿತ್ತ ಸಚಿವಾಲಯ ತೆರಿಗೆಯಿಂದ ಮುಕ್ತಗೊಳಿಸಿದೆ.
2017ರ ಎಪ್ರಿಲ್ನಲ್ಲಿ ಈ ಟ್ರಸ್ಟ್ನ್ನು ರಚನೆ ಮಾಡಲಾಗಿದ್ದು, ಹುತಾತ್ಮ ಯೋಧರ ಕುಟುಂಬಿಕರಿಗೆ ದೇಣೀಗೆ ನೀಡಲು ಸಾರ್ವಜನಿಕರಿಗೆ ಇದು ಅವಕಾಶ ಕಲ್ಪಿಸಿಕೊಡುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.