ಹೈದರಾಬಾದ್: ನಿರೀಕ್ಷೆಯಂತೆಯೇ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು ಅವಧಿಗೂ ಮುನ್ನವೇ ವಿಧಾನಸಭೆ ಚುನಾವಣೆಗೆ ತೆರಳಲು ನಿರ್ಧರಿಸಿದ್ದು, ಈ ಸಂಬಂಧ ಗುರುವಾರ ನಡೆದ ಸಂಪುಟ ಸಭೆಯಲ್ಲಿ ವಿಧಾನಸಭೆ ವಿಸರ್ಜನೆಗೆ ನಿರ್ಣಯ ಕೈಗೊಳ್ಳಲಾಗಿದೆ.
ಇಂದು ಬೆಳಗ್ಗೆ ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ಕೆಸಿಆರ್ ನಿರ್ಣಯಕ್ಕೆ ಸಂಪುಟ ಸಭೆಯಲ್ಲಿ ಅವಿರೋಧ ಒಪ್ಪಿಗೆ ನೀಡಲಾಗಿದೆ. ಬಳಿಕ ಸಿಎಂ ಕೆಸಿಆರ್ ಅವರು ರಾಜಭವನಕ್ಕೆ ತೆರಳಿ ಅಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ವಿಧಾನಸಭೆ ವಿಸರ್ಜಿಸುವ ಸಂಪುಟ ನಿರ್ಣಯದ ಪ್ರತಿಯನ್ನು ಸಲ್ಲಿಸಿದರು. ನಿರ್ಣಯವನ್ನು ರಾಜ್ಯಪಾಲರು ಅಂಗೀಕರಿಸಿದ್ದು, ನೂತನ ಸರ್ಕಾರ ರಚನೆಯಾಗುವವರೆಗೆ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರೆಯುವಂತೆ ಕೆಸಿಆರ್ ಅವರಿಗೆ ಸೂಚಿಸಿದ್ದಾರೆ.
ತೆಲಂಗಾಣ ಮೊದಲ ವಿಧಾನಸಭೆಯ ಅವಧಿ 2019ರ ಏಪ್ರಿಲ್-ಮೇ ವರೆಗೆ ಇದೆಯಾದರೂ, ಇದೇ ನವೆಂಬರ್ ಮತ್ತು ಡಿಸೆಂಬರ್ನಲ್ಲಿ ರಾಜಸ್ಥಾನ, ಮಧ್ಯಪ್ರದೇಶ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಅದರ ಜತೆಗೇ ಚುನಾವಣೆ ಎದುರಿಸಲು ಕೆಸಿಆರ್ ತೀರ್ಮಾನಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.