ನವದೆಹಲಿ: 1898ರ ಸೆ.11ರಂದು ಅಮೆರಿಕಾದ ಚಿಕಾಗೋದಲ್ಲಿ ನಡೆದ ವಿಶ್ವ ಸರ್ವಧರ್ಮ ಸಮ್ಮೇಳನದಲ್ಲಿ, ಭಾರತದ ವೇದಾಂತ ಕೇಸರಿ ಸ್ವಾಮಿ ವಿವೇಕಾನಂದರು ನಡೆಸಿದ ಐತಿಹಾಸಿಕ ಭಾಷಣಕ್ಕೆ 125 ವರ್ಷಗಳು ಸಂದ ಹಿನ್ನಲೆಯಲ್ಲಿ ನಡೆದ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಇಂದು ಮಾತನಾಡಿದರು.
ತಮಿಳುನಾಡಿನ ಕೊಯಂಬತ್ತೂರಿನಲ್ಲಿ ರಾಮಕೃಷ್ಣ ಮಠ ಆಯೋಜನೆಗೊಳಿಸಿದ ಸಮಾರಂಭವನ್ನು ಉದ್ದೇಶಿಸಿ ವಿಡಿಯೋಕಾನ್ಫರೆನ್ಸ್ ಮೂಲಕ ಮೋದಿ ಭಾಷಣ ಮಾಡಿದರು.
‘ಸ್ವಾಮೀಜಿ ಅವರು ಭಾರತದ ಭವಿಷ್ಯ ಯುವ ಜನತೆಯ ಮೇಲೆ ಅವಲಂಬಿತವಾಗಿದೆ ಎಂಬುದನ್ನು ಬಲವಾಗಿ ನಂಬಿದ್ದರು. ಇಂದಿನ ಯುವಜನತೆ ಗುರಿಯ ಜ್ಞಾನದೊಂದಿಗೆ ದಿಟ್ಟ ಹೆಜ್ಜೆಯಿಡುತ್ತಿರುವುದನ್ನು ನೋಡಲು ಸಂತಸವಾಗುತ್ತದೆ’ ಎಂದರು.
’ನಮ್ಮದು ಮುಕ್ತ ವಿಚಾರಗಳನ್ನು ಹೊಂದಿರುವ ದೇಶ, ನಾವು ಯಾವುದೇ ವಿಚಾರದ ಮೇಲೆ ಚರ್ಚಿಸಿ ತೀರ್ಮಾನಿಸುವ ಸಂಪ್ರದಾಯವನ್ನು ಹೊಂದಿದ್ದೇವೆ. ಅಂತಹ ವೈವಿಧ್ಯತೆ ಇರುವ ದೇಶದಲ್ಲಿ ಪ್ರಜಾಪ್ರಭುತ್ವ ಬಹುದೊಡ್ಡ ಪಾತ್ರ ಹೊಂದಿದೆ’ ಎಂದು ಪ್ರಧಾನಿ ಮೋದಿಯವರು ಹೇಳಿದರು. ಇದೇ ಸಂದರ್ಭದಲ್ಲಿ ಅಮೆರಿಕಾದಲ್ಲಿ ನಡೆದ ಸೆ.11 ರ ದಾಳಿಯನ್ನು ನೆನೆದು ವಿಶ್ವದಲ್ಲಿ ಹೆಚ್ಚುತ್ತಿರುವ ಭಯೋತ್ಪಾದನೆಯ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು.
ನಮ್ಮಲ್ಲಿನ ಆಂತರಿಕ ಒಡಕುಗಳಿಂದ ಉಂಟಾದ ಸಂಘರ್ಷಗಳನ್ನು ಉಪಯೋಗಿಸಿಕೊಂಡು ಬಾಹ್ಯ ಶತ್ರುಗಳು ಪ್ರಯೋಜನ ಪಡೆದಿದ್ದಾರೆ. ನಮ್ಮ ಪೂರ್ವಜರು ನಮಗೆ ಸರಿಯಾದ ಮಾರ್ಗವನ್ನು ತೋರಿಸಿದ್ದಾರೆ. ಸ್ವಾಮಿ ವಿವೇಕಾನಂದರ ತತ್ವಾದರ್ಶಗಳನ್ನು ಅನುಸರಿಸುವ ಮೂಲಕ ನಾವು ನವಭಾರತವನ್ನು ನಿರ್ಮಿಸಬೇಕು ಎಂದು ಪ್ರಧಾನಿ ಮೋದಿ ಹೇಳಿದರು.
‘ಏಕ್ ಭಾರತ್, ಶ್ರೇಷ್ಠ್ ಭಾರತ್’ ತತ್ವಜ್ಞಾನವು ಸ್ವಾಮೀಜಿಯವರ ಭಾಷಣದ ಅಸ್ತಿತ್ವವನ್ನು ಹೊಂದಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.