ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘ ಮುಂದಿನ ವಾರ ದೆಹಲಿಯಲ್ಲಿ 3 ದಿನಗಳ ಉಪನ್ಯಾಸ ಸರಣಿಯನ್ನು ಆಯೋಜನೆಗೊಳಿಸುತ್ತಿದೆ. ಇದರಲ್ಲಿ ಭಾಗಿಯಾಗುವಂತೆ ಅದು 60 ದೇಶಗಳಿಗೆ ಆಹ್ವಾನ ನೀಡಲಿದೆ.
ಶೀಘ್ರದಲ್ಲೇ 60 ದೇಶಗಳ ರಾಯಭಾರಿಗಳಿಗೆ ಆಹ್ವಾನ ಪತ್ರಿಕೆಯನ್ನು ಆರ್ಎಸ್ಎಸ್ ಕಳುಹಿಸಿಕೊಡಲಿದೆ ಎಂದು ಮೂಲಗಳು ತಿಳಿಸಿವೆ.
ಅಲ್ಲದೇ ಎಲ್ಲಾ ರಾಷ್ಟ್ರೀಯ ಪಕ್ಷಗಳಿಗೂ, ಪ್ರಾದೇಶಿಕ ಪಕ್ಷಗಳಿಗೂ ಅದು ಆಹ್ವಾನವನ್ನು ನೀಡಿಲಿದೆ. ಕೈಗಾರಿಕೆ, ಮಾಧ್ಯಮ, ಇತರ ವಲಯಗಳ ಮುಖಂಡರಿಗೂ ಆಹ್ವಾನವನ್ನು ನೀಡಲಿದೆ.
ಪಾಕಿಸ್ಥಾನವನ್ನು ಹೊರತುಪಡಿಸಿ ಬಹುತೇಕ ಎಲ್ಲಾ ರಾಷ್ಟ್ರಗಳ ರಾಯಭಾರಿಗಳಿಗೆ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಹ್ವಾನವನ್ನು ನೀಡುತ್ತಿರುವುದಾಗಿ ಆರ್ಎಸ್ಎಸ್ ಮೂಲಗಳು ಸ್ಪಷ್ಟಪಡಿಸಿವೆ.
ಸೆ.17ರಿಂದ ಮೂರು ದಿನಗಳ ಉಪನ್ಯಾಸ ಜರುಗಲಿದ್ದು, ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪ್ರಮುಖ ಭಾಷಣ ಮಾಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.