ಬಿಲ್ವಾರ: ಚುನಾವಣಾ ಪ್ರಚಾರಕ್ಕೆ ತೆರಳಿದಾಗ ಭಾರತ ಮಾತೆ ಮತ್ತು ಕಮಲದ ಬಗ್ಗೆ ಮಾತ್ರ ಚಿಂತನೆ ಮಾಡಿ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು, ತಮ್ಮ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ರಾಜಸ್ಥಾನದ ಬಿಲ್ವಾರದಲ್ಲಿ ಸೋಮವಾರ ನಡೆದ ‘ಶಕ್ತಿ ಕೇಂದ್ರ ಸಮ್ಮೇಳನ’ ಕಾರ್ಯಕ್ರಮದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಬೂತ್ ಮಟ್ಟದಲ್ಲಿ ಶ್ರಮವಹಿಸಿ ದುಡಿಯುವಂತೆ ಕಾರ್ಯಕರ್ತರನ್ನು ಹುರಿದುಂಬಿಸಿದರು.
ಚುನಾವಣೆಯನ್ನು ಕೇವಲ ಸರ್ಕಾರದ ಸಾಧನೆಗಳಿಂದ ಜಯಿಸಲು ಸಾಧ್ಯವಿಲ್ಲ, ಚುನಾವಣೆ ಮುಖ್ಯಮಂತ್ರಿ, ಪಕ್ಷದ ನಾಯಕರಿಗಿಂತಲೂ ಹೆಚ್ಚಾಗಿ ಕಾರ್ಯಕರ್ತರದ್ದಾಗಿದೆ ಎಂದರು.
ಎನ್ಆರ್ಸಿ ಮತ್ತು ಸರ್ಜಿಕಲ್ ಸ್ಟ್ರೈಕ್ ವಿಷಯದಲ್ಲಿ ಕಾಂಗ್ರೆಸ್ ಪಕ್ಷವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಅವರು, ಪ್ರತಿ ಪಕ್ಷಗಳು ಮಾಡಿಕೊಳ್ಳುತ್ತಿರುವ ಮಹಾಮೈತ್ರಿಗೆ ಬಿಜೆಪಿಯನ್ನು ಸೋಲಿಸುವ ಸಾಮರ್ಥ್ಯ ಇಲ್ಲ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.