ನವದೆಹಲಿ: ಸರ್ಕಾರಿ ಸ್ವಾಮ್ಯದ ಮೂರು ಬ್ಯಾಂಕುಗಳಾದ ದೇನಾ ಬ್ಯಾಂಕ್, ವಿಜಯ ಬ್ಯಾಂಕ್, ಬ್ಯಾಂಕ್ ಆಫ್ ಬರೋಡ ವಿಲೀನಗೊಳ್ಳುತ್ತಿದ್ದು, ದೇಶದ 3ನೇ ಅತೀದೊಡ್ಡ ಬ್ಯಾಂಕ್ ಆಗಿ ಹೊರಹೊಮ್ಮಲಿದೆ. ಬ್ಯಾಂಕಿಂಗ್ ವಲಯದ ಶುದ್ಧೀಕರಣದ ಭಾಗವಾಗಿ ಈ ವಿಲೀನ ನಡೆಯುತ್ತಿದೆ.
ವಿತ್ತ ಸಚಿವ ಅರುಣ್ ಜೇಟ್ಲಿ ಜೊತೆಗೂಡಿ ಪತ್ರಿಕಾಗೋಷ್ಠಿ ನಡೆಸಿದ ಹಣಕಾಸು ಸೇವಾ ಕಾರ್ಯದರ್ಶಿ ರಾಜೀವ್ ಕುಮಾರ್ ಅವರು ಈ ಬಗ್ಗೆ ಘೋಷಣೆ ಮಾಡಿದ್ದಾರೆ. ವಿಲೀನಗೊಂಡ ಸಂಸ್ಥೆಗೆ ಸರ್ಕಾರ ಹಣಕಾಸು ನೆರವನ್ನು ನೀಡುವುದು ಮುಂದುವರೆಯಲಿದೆ ಎಂದಿದ್ದಾರೆ.
ಈ ಪ್ರಸ್ತಾಪವನ್ನು ಮೂರು ಬ್ಯಾಂಕುಗಳ ಮಂಡಳಿಗಳಿಗೆ ಕಳುಹಿಸಿಕೊಡಲಾಗುತ್ತಿದ್ದು, ಯಾವುದೇ ಪ್ರಕ್ರಿಯೆ ಆರಂಭಿಸುವುದಕ್ಕೂ ಮುನ್ನ ಅನುಮೋದನೆಯ ಅಗತ್ಯವಿದೆ ಎಂದು ರಾಜೀವ್ ಹೇಳಿದ್ದಾರೆ.
ಬ್ಯಾಂಕಿಂಗ್ ವಲಯ ಸುಧಾರಣೆಗೊಳ್ಳುವ ಅಗತ್ಯವಿದೆ ಮತ್ತು ಬ್ಯಾಂಕುಗಳ ಪ್ರಮುಖ ಬೇಡಿಕೆಗಳನ್ನು ಸರ್ಕಾರ ಪೂರೈಸಲಿದೆ ಎಂದಿದ್ದಾರೆ.
ಈ ಹಣಕಾಸು ವರ್ಷದ ಅಂತ್ಯದೊಳಗೆ ವಿಲೀನ ಪ್ರಕ್ರಿಯೆ ಮುಕ್ತಾಯಗೊಳ್ಳುವ ನಿರೀಕ್ಷೆಯಲ್ಲಿ ಸರ್ಕಾರ ಇದೆ. ವಿಲೀನಗೊಳ್ಳುವವರೆಗೂ ಮೂರು ಬ್ಯಾಂಕುಗಳು ಸ್ವತಂತ್ರವಾಗಿ ಕಾರ್ಯನಿರ್ವಹಣೆ ಮಾಡಲಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.