ನವದೆಹಲಿ: ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನು ಇಟ್ಟಿರುವ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಅನ್ನದಾತ ಆಯ್ ಸಂರಕ್ಷಣ್ ಅಭಿಯಾನ (ಪಿಎಂ-ಆಶಾ)ಎಂಬ ಅಂಬ್ರೆಲ್ಲಾ ಯೋಜನೆಯನ್ನು ಆರಂಭಿಸುತ್ತಿದೆ. ಸೆ.12ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಯೋಜನೆಗೆ ಅನುಮೋದನೆಯನ್ನು ನೀಡಲಾಗಿದೆ.
2018ರ ಬಜೆಟ್ನಲ್ಲಿ ಘೋಷಿಸಿದಂತೆ ಈ ಯೋಜನೆ, ರೈತರು ಬೆಳೆದ ಬೆಳೆಗಳಿಗೆ ಲಾಭದಾಯಕ ಬೆಲೆಯನ್ನು ಖಾತರಿಪಡಿಸುವ ಗುರಿಯನ್ನು ಹೊಂದಿದೆ. ಅಲ್ಲದೇ ಈ ಅಂಬ್ರೆಲ್ಲಾ ಯೋಜನೆ ಬೆಲೆ ಬೆಂಬಲ ಯೋಜನೆ, ಬೆಲೆ ಕೊರತೆ ಪಾವತಿ ಯೋಜನೆ ಅಥವಾ ಭವಾಂತರ್ ಭುಗಟನ್ ಯೋಜನೆ, ಇತ್ಯಾದಿಗಳನ್ನು ಒಳಗೊಂಡಿದೆ.
ಬೆಲೆ ಬೆಂಬಲ ಯೋಜನೆ ಮೂಲಕ ಧಾನ್ಯಗಳ, ಎಣ್ಣೆ ಬೀಜಗಳ, ಕೊಬ್ಬರಿಗಳ ಸಂಗ್ರಹಣೆಯನ್ನು ಸೆಂಟ್ರಲ್ ನೋಡಲ್ ಏಜೆನ್ಸಿಗಳು ರಾಜ್ಯ ಸರ್ಕಾರಗಳ ಭಾಗಿಯೊಂದಿಗೆ ಮಾಡಲಿದೆ.
ಅಲ್ಲದೇ ಫುಡ್ ಕಾರ್ಪೋರೇಶನ್ ಆಫ್ ಇಂಡಿಯಾ ರಾಜ್ಯ ಮತ್ತು ಜಿಲ್ಲೆಗಳಲ್ಲಿ ಪಿಎಸ್ಎಸ್ಗಳ ನಿರ್ವಹಣೆಯನ್ನು ಕೈಗೆತ್ತಿಕೊಳ್ಳಲಿದೆ.ಸಂಗ್ರಹಣಾ ವೆಚ್ಚ, ಸಂಗ್ರಹಣೆಯಿಂದ ನಷ್ಟವುಂಟಾದರೆ ಅದರ ವೆಚ್ಚವನ್ನು ಕೇಂದ್ರವೇ ಭರಿಸಲಿದೆ.
ಬೆಲೆ ಕೊರತೆ ಪಾವತಿ ಯೋಜನೆಯಡಿ, ಸಂಗ್ರಹಣಾ ನಿರ್ವಹಣೆಯಲ್ಲಿ ಖಾಸಗಿ ವಲಯದ ಸಹಭಾಗಿತ್ವ ಪಡೆಯಲು ಸರ್ಕಾರ ನಿರ್ಧರಿಸಿದೆ.
ಈ ಯೋಜನೆಯ ಅನುಷ್ಠಾನಕ್ಕೆ ಸರ್ಕಾರ ಈಗಾಗಲೇ ರೂ 15,053 ಕೋಟಿಗಳನ್ನು ಬಿಡುಗಡೆಗೊಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.