ಭೋಪಾಲ್: ಜನಸಂಘ ಸಂಸ್ಥಾಪಕ ಪಂಡಿತ್ ದೀನ್ದಯಾಳ್ ಉಪಾಧ್ಯಾಯ ಅವರ ಜನ್ಮದಿನದ ಪ್ರಯುಕ್ತ ಭೋಪಾಲ್ನಲ್ಲಿ ಬಿಜೆಪಿ ಕಾರ್ಯಕರ್ತರ ಮಹಾಕುಂಭವನ್ನು ಆಯೋಜನೆಗೊಳಿಸಿದ್ದು, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇದರಲ್ಲಿ ಭಾಗಿಯಾದರು.
ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮೋದಿ, ‘ಪಂಡಿತ್ ದೀನ್ದಯಾಳ್ ಉಪಾಧ್ಯಾಯರ ಚಿಂತನೆ, ಜೀವನ, ವ್ಯಕ್ತಿತ್ವ ಇಂದಿಗೂ ನಮಗೆ ಪ್ರೇರಣೆಯಾಗಿದೆ’ ಎಂದರು.
ದೇಶ ಮಹಾತ್ಮ ಗಾಂಧೀ, ರಾಮ್ ಮನೋಹರ್ ಲೋಹಿಯಾ, ದೀನ್ ದಯಾಳ್ ಉಪಾಧ್ಯಾಯ ಅವರನ್ನು ಎಂದಿಗೂ ಮರೆಯಲಾರದು. ಈ ಮೂವರು ಜನರ ಒಳಿತಿಗಾಗಿ ಶ್ರಮಿಸಿದರು, ಜನರನ್ನು ಸಾಧನೆಯತ್ತ ಕೊಂಡೊಯ್ದರು ಎಂದರು.
ವೋಟ್ ಬ್ಯಾಂಕ್ ರಾಜಕಾರಣ ದೇಶವನ್ನು ಗೆದ್ದಲು ಹಿಡಿದಂತೆ ಮಾಡಿದೆ, ನಮ್ಮ ಸರ್ಕಾರ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟಿದೆ ಎಂದರು.
ಬೆಳಿಗ್ಗೆ 10 ಗಂಟೆಗೆ ಖ್ಯಾತ ಗಾಯಕ ಕೈಲಾಸ್ ಖೇರ್ ಅವರ ಸಂಗೀತ ಕಾರ್ಯಕ್ರಮದೊಂದಿಗೆ ಕಾರ್ಯಕ್ರಮ ಆರಂಭಗೊಂಡಿದ್ದು, ಮಧ್ಯಪ್ರದೇಶದ 230 ವಿಧಾನಸಭಾ ಕ್ಷೇತ್ರಗಳ 65 ಸಾವಿರ ಮತಗಟ್ಟೆಗಳ ಸುಮಾರು 10 ಲಕ್ಷ ಕಾರ್ಯಕರ್ತರು ಇದರಲ್ಲಿ ಭಾಗಿಯಾಗಿದ್ದಾರೆ.
ಬಿಜೆಪಿ ಮುಖಂಡ, ದಿವಂಗತ ಅನಿಲ್ ದಾವೆ ಅವರ ಹೆಸರಿನಲ್ಲಿ ಸಮಾವೇಶದಲ್ಲಿ ಎಕ್ಸಿಬಿಷನ್ ಕೂಡ ಏರ್ಪಡಿಸಲಾಗಿದೆ. ವಾಜಪೇಯಿ ಸೇರಿದಂತೆ ಬಿಜೆಪಿ ಮುಖಂಡರ ಯಶೋಗಾಥೆಯನ್ನು ಇಲ್ಲಿ ಪ್ರದರ್ಶಿಸಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.