ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆ ಪ್ರಸ್ತುತ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಬೆಳಕು ಚೆಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರು, ಉತ್ತಮ ಶಿಕ್ಷಣ ವ್ಯವಸ್ಥೆಯನ್ನು ಜಾರಿಗೆ ತರುವ ಅಗತ್ಯತೆಯನ್ನು ಪ್ರತಿಪಾದಿಸಿದ್ದಾರೆ.
ಶೈಕ್ಷಣಿಕ ನಾಯಕತ್ವದ ಮೇಲೆ ನಡೆದ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಶಿಕ್ಷಣ ಮತ್ತು ಜ್ಞಾನವನ್ನು ಪುಸ್ತಕಗಳಿಗೆ ಸೀಮಿತಗೊಳಿಸಬಾರದು. ಮಾನವನ ಪ್ರತಿ ಆಯಾಮದ ಸಮತೋಲನ ಪ್ರಗತಿಯನ್ನು ಸಾಧಿಸುವುದು ಶಿಕ್ಷಣದ ಗುರಿಯಾಗಿರಬೇಕು, ಸಂಶೋಧನೆಗಳಿಲ್ಲದೆ ಇದು ಸಾಧ್ಯವಾಗರಲಾರದು’ ಎಂದಿದ್ದಾರೆ.
ದೇಶದ ಶಿಕ್ಷಣ ಮೂಲಸೌಕರ್ಯವನ್ನು ವೃದ್ಧಿಸುವಲ್ಲಿ ಸರ್ಕಾರ ಹೆಚ್ಚಿನ ಗಮನವನ್ನು ನೀಡಿದೆ, 2022ರವರೆಗೆ ಶಿಕ್ಷಣ ಮೂಲಸೌಕರ್ಯ ವೃದ್ಧಿಗೆ 1ಲಕ್ಷ ಕೋಟಿಗಳನ್ನು ಹೂಡಿಕೆ ಮಾಡಲಿದ್ದೇವೆ ಎಂದಿದ್ದಾರೆ.
ಈ ವಿಚಾರ ಸಂಕಿರಣದಲ್ಲಿ ದೇಶದ 350 ಉನ್ನತ ಶಿಕ್ಷಣ ಸಂಸ್ಥೆಗಳ ಉಪ ಕುಲಪತಿಗಳು, ನಿರ್ದೇಶಕರು ಭಾಗಿಯಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.