ನವದೆಹಲಿ: ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕ ಜಾರಿಗೊಳಿಸಲು ಉದ್ದೇಶಿಸಿರುವ ಜೀವ ರಕ್ಷಕರ ಕಾನೂನು ರಕ್ಷಣಾ ಮಸೂದೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಅಂಕಿತ ಹಾಕಿದ್ದಾರೆ. ಅಪಘಾತಕ್ಕೀಡಾದವರ ಜೀವ ಉಳಿಸುವ ಅಪತ್ಭಾಂಧವರನ್ನು ಕಾನೂನಿನಡಿ ರಕ್ಷಣೆ ಮಾಡುವ ಮಸೂದೆ ಇದಾಗಿದೆ.
ಕರ್ನಾಟಕ ಜೀವ ರಕ್ಷಕರು ಮತ್ತು ವೈದ್ಯಕೀಯ ವೃತ್ತಿಪರರು(ತುರ್ತುಪರಿಸ್ಥಿತಿಗಳಲ್ಲಿ ರಕ್ಷಣೆ ಮತ್ತು ನಿರ್ಬಂಧ) ಮಸೂದೆ, 2016ನನ್ನು ಕರ್ನಾಟಕ ಜಾರಿಗೊಳಿಸುತ್ತಿದೆ. ಈ ಮೂಲಕ ಅಪಘಾತಕ್ಕೊಳಗಾದವರ ಜೀವ ರಕ್ಷಣೆ ಮಾಡುವವರಿಗೆ ಕಾನೂನಿನ ರಕ್ಷಣೆ ನೀಡುವ ಕಾನೂನನ್ನು ದೇಶದಲ್ಲೇ ಮೊದಲ ಬಾರಿಗೆ ನಮ್ಮ ರಾಜ್ಯ ಜಾರಿಗೊಳಿಸುತ್ತಿದೆ.
ಅಪಘಾತಕ್ಕೀಡಾದ ವ್ಯಕ್ತಿಯ ಜೀವ ಉಳಿಸಲು ಅವಕಾಶವಿರುವ ‘ಗೋಲ್ಡನ್ ಅವರ್’ನಲ್ಲಿ ಆತನನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡುವ ಯಾರೊಬ್ಬರೂ ಕಾನೂನು ಪ್ರಕ್ರಿಯೆ ಸಮಸ್ಯೆಯನ್ನು ಎದುರಿಸದಂತೆ ಈ ಮಸೂದೆ ನೋಡಿಕೊಳ್ಳಲಿದೆ.
http://www.newsonair.com
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.