ನವದೆಹಲಿ: ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೊನಿಯೋ ಗುಟೆರ್ರೆಸ್ ಅವರು, ಬುಧವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ‘UNEP ಚಾಂಪಿಯನ್ಸ್ ಆಫ್ ದಿ ಅರ್ಥ್’ ಅವಾರ್ಡ್ನ್ನು ನೀಡಿ ಪುರಸ್ಕರಿಸಿದರು.
ಪ್ರವಾಸಿ ಭಾರತೀಯ ಕೇಂದ್ರದಲ್ಲಿ ಜರುಗಿದ ವಿಶೇಷ ಸಮಾರಂಭದಲ್ಲಿ ಪ್ರಧಾನಿಯವರಿಗೆ ವಿಶ್ವಸಂಸ್ಥೆಯ ಈ ಅತ್ಯುನ್ನತ ಪರಿಸರ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.
ಸೆ.27ರಂದು ವಿಶ್ವಸಂಸ್ಥೆಯ 73ನೇ ಸಾಮಾನ್ಯ ಸಭೆಯ ಸೈಡ್ಲೈನ್ನಲ್ಲಿ ಈ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿತ್ತು. ಇಂದು ಇದನ್ನು ಗುಟೆರ್ರೆಸ್ ಪ್ರದಾನ ಮಾಡಿದರು.
ಈ ವೇಳೆ ಮಾತನಾಡಿದ ಮೋದಿ, ‘ಇದು ಎಲ್ಲಾ ಭಾರತೀಯರಿಗೂ ಸಂದ ಗೌರವವಾಗಿದೆ. ಭಾರತೀಯರು ಪರಿಸರ ಸಂರಕ್ಷಣೆಗೆ ಬದ್ಧವಾಗಿದ್ದಾರೆ’ ಎಂದರು.
ಇಂಟರ್ನ್ಯಾಷನಲ್ ಸೋಲಾರ್ ಅಲೆಯನ್ಸ್ಗೆ ಮುನ್ನುಡಿ ಬರೆದ ಕಾರಣಕ್ಕಾಗಿ ವಿಶ್ವಸಂಸ್ಥೆ ಮೋದಿಯವರಿಗೆ ‘ಚಾಂಪಿಯನ್ಸ್ ಆಫ್ ಅರ್ಥ್’ ಅವಾರ್ಡ್ನ್ನು ನೀಡಿ ಪುರಸ್ಕರಿಸಿದೆ.
source; ANI
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.