ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಶನಿವಾರ, 4ನೇ ’ಇಂಡಿಯಾ ಇಂಟರ್ನ್ಯಾಷನಲ್ ಸೈನ್ಸ್ ಫೆಸ್ಟಿವಲ್(ಐಐಎಸ್ಎಫ್)ನ್ನು ಉದ್ಘಾಟನೆಗೊಳಿಸಲಿದ್ದಾರೆ.
ಲಕ್ನೋದ ಇಂದಿರಾ ಗಾಂಧಿ ಪ್ರತಿಷ್ಠಾನದಲ್ಲಿ ‘ಪರಿವರ್ತನೆಗಾಗಿ ವಿಜ್ಞಾನ’ ಎಂಬ ಘೋಷವಾಕ್ಯದೊಂದಿಗೆ ಅ.6ರಿಂದ 8ರವರೆಗೆ ಕಾರ್ಯಕ್ರಮ ಜರುಗಲಿದೆ.
ವಿಜ್ಞಾನವನ್ನು ರಾಷ್ಟ್ರೀಯ ಅಜೆಂಡಾದ ಕೇಂದ್ರ ಸ್ಥಾನಕ್ಕೆ ತಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಅರ್ಪಣೆಗೊಳಿಸಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ಕೇಂದ್ರ ಸಚಿವ ಡಾ.ಹರ್ಷವರ್ಧನ್ ಹೇಳಿದ್ದಾರೆ.
ಈ ಫೆಸ್ಟಿವಲ್ನಲ್ಲಿ ಪ್ರಧಾನಿಗಳ ಸಂಸದ್ ಆದರ್ಶ್ ಗ್ರಾಮ ಯೋಜನೆಯಡಿ 25 ರಾಜ್ಯಗಳ 2,500 ವಿದ್ಯಾರ್ಥಿಗಳು, 550 ಶಿಕ್ಷಕರು, 200 ಈಶಾನ್ಯ ಭಾಗದ ವಿದ್ಯಾರ್ಥಿಗಳು, 20 ಅಂತಾರಾಷ್ಟ್ರೀಯ ಅತಿಥಿಗಳು, 200 ಸ್ಟಾರ್ಟ್ಅಪ್ಗಳು, 800 ಮಹಿಳಾ ಉದ್ಯಮಿಗಳು, 800 ಯುವ ವಿಜ್ಞಾನಿಗಳು ಸೇರಿದಂತೆ ಒಟ್ಟು 10 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ.
source; TEC2
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.