ನವದೆಹಲಿ: ಉನ್ನತ ವ್ಯಾಸಂಗ ಮಾಡಲು ಬಯಸುವ ವಿದ್ಯಾರ್ಥಿಗಳು ಇನ್ನುಮುಂದೆ ತಮ್ಮ ಒರಿಜಿನಲ್ ದಾಖಲೆಗಳನ್ನು, ದಾಖಲಾತಿ ಖಚಿತಗೊಳ್ಳುವದಕ್ಕೂ ಮುನ್ನ ತಮ್ಮ ಶೈಕ್ಷಣಿಕ ಸಂಸ್ಥೆಗಳಿಗೆ ಸಲ್ಲಿಕೆ ಮಾಡುವ ಅಗತ್ಯವಿಲ್ಲ. ಈ ಬಗ್ಗೆ ಯುಜಿಸಿ ಸುತ್ತೋಲೆಯನ್ನು ಹೊರಡಿಸಿದೆ.
ಯುಜಿಸಿಯ ಈ ನಿರ್ಧಾರ ಉನ್ನತ ವ್ಯಾಸಂಗ ಮಾಡುವ ಸಾವಿರಾರು ವಿದ್ಯಾರ್ಥಿಗಳಿಗೆ ನಿರಾಳತೆಯನ್ನು ತಂದು ಕೊಟ್ಟಿದೆ. ಅಷ್ಟೇ ಅಲ್ಲದೇ ಒಂದು ವೇಳೆ ವಿದ್ಯಾರ್ಥಿಗಳು ತಮ್ಮ ಹೆಸರನ್ನು ದಾಖಲಾತಿ ಪ್ರಕ್ರಿಯೆಯಿಂದ ಹಿಂಪಡೆಯಲು ಬಯಸಿದರೆ ಈ ವೇಳೆ ಸಂಸ್ಥೆಗಳು ಆ ವಿದ್ಯಾರ್ಥಿಯ ಹಣವನ್ನು ರಿಫಂಡ್ ಮಾಡಬೇಕಾಗುತ್ತದೆ. ಕೇವಲ ರೂ.5000 ವರೆಗೆ ಮಾತ್ರ ಪ್ರಕ್ರಿಯೆಯ ಶುಲ್ಕವಾಗಿ ಸ್ವೀಕರಿಸಬೇಕಾಗುತ್ತದೆ.
ಯುಜಿಸಿ ಸುತ್ತೋಲೆಯನ್ನು ಸಮರ್ಥಿಸಿಕೊಂಡಿರುವ ಕೇಂದ್ರ ಸಚಿವ ಪ್ರಕಾಶ ಜಾವಡೇಕರ ಅವರು ಪ್ರತೀ ವರ್ಷ ನಮಗೆ ದಾಖಲಾತಿಗೆ ಸಂಬಂಧಿಸಿದಂತೆ ನೂರಾರು ದೂರುಗಳು ಬರುತ್ತವೆ. ಈ ಹಿನ್ನಲೆಯಲ್ಲಿ ದಾಖಲಾತಿ ಪ್ರಕ್ರಿಯೆಯನ್ನು ಸರಳಗೊಳಿಸಲು ನಿರ್ಧರಿಸಿದ್ದೇವೆ. ಇನ್ನುಮುಂದೆ ದಾಖಲಾತಿ ಖಚಿತಗೊಳ್ಳುವ ಮುನ್ನ ವಿದ್ಯಾರ್ಥಿಗಳು ಶೈಕ್ಷಣಿಕ ಸಂಸ್ಥೆಗಳಿಗೆ ತಮ್ಮ ಒರಿಜಿನಲ್ ದಾಖಲೆ ಸಲ್ಲಿಕೆ ಮಾಡಬೇಕಾಗಿಲ್ಲ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.