ನವದೆಹಲಿ: ಪ್ರತಿಪಕ್ಷಗಳು ಮಾಡಿಕೊಳ್ಳಲು ಇಚ್ಛಿಸಿರುವ ಮಹಾಮೈತ್ರಿ ಒಂದು ವಿಫಲ ಯೋಜನೆಯಾಗಿದ್ದು, ಕೇಂದ್ರದಲ್ಲಿ ಒಂದು ದುರ್ಬಲ ಸರ್ಕಾರವನ್ನು ಆಡಳಿತಕ್ಕೆ ತರಬೇಕು ಎಂಬ ಉದ್ದೇಶದೊಂದಿಗೆ ಇದನ್ನು ರಚನೆ ಮಾಡಲಾಗುತ್ತದೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ.
ಇಂದು ನರೇಂದ್ರ ಮೋದಿ ಅಪ್ಲಿಕೇಶನ್ ಮೂಲಕ ದೇಶದ 5 ಲೋಕಸಭಾ ಕ್ಷೇತ್ರಗಳ ಬಿಜೆಪಿ ಕಾರ್ಯಕರ್ತತನ್ನು ಉದ್ದೇಶಿಸಿ ಅವರು ಮಾತನಾಡಿದರು. ಮೊದಲು ಪ್ರತಿಪಕ್ಷಗಳು ಪರಸ್ಪರ ಕಿತ್ತಾಟದಲ್ಲಿ ತೊಡಗಿಕೊಳ್ಳುತ್ತವೆ ಆದರೆ ಅವಕಾಶ ಸಿಕ್ಕಾಗ ಒಂದುಗೂಡಿ ಅಧಿಕಾರಕ್ಕೇರಲು ಹವಣಿಸುತ್ತವೆ ಎಂದು ಅವರು ಆರೋಪಿಸಿದರು.
ಪ್ರತಿಪಕ್ಷಗಳು ದೇಶದ ಸಂಸ್ಕೃತಿ ಮತ್ತು ಪರಂಪರೆಯನ್ನು ಗೌರವಿಸುವುದಿಲ್ಲ ಎಂದ ಪ್ರಧಾನಿ ಮೋದಿ ಇಡೀ ವಿಶ್ವವೇ ಭಾರತದ ಸಂಸ್ಕೃತಿಯತ್ತ ತಿರುಗಿ ನೋಡುತ್ತಿದೆ. ಆದರೆ ನಮ್ಮದೇ ದೇಶದಲ್ಲಿರುವ ಪ್ರತಿಪಕ್ಷಗಳಿಗೆ ಇದರ ಬಗ್ಗೆ ಸ್ವಲ್ಪವೂ ಗೌರವ, ಆದರಗಳು ಇಲ್ಲ ಎಂದು ಅವರು ಆರೋಪಿಸಿದ್ದಾರೆ.
ಮಧ್ಯಪ್ರದೇಶದ ದಮೊಹಾ, ಉತ್ತರಪ್ರದೇಶದ ಆಗ್ರಾ, ರಾಜಸ್ಥಾನದ ಕರೌಲಿ, ಛತ್ತೀಸಗಢದ ರಾಯ್ಪುರ ಹಾಗೂ ಕರ್ನಾಟಕದ ಮೈಸೂರು ಈ 5 ಲೋಕಸಭಾ ಕ್ಷೇತ್ರಗಳ ಕಾರ್ಯಕರ್ತರೊಂದಿಗೆ ಮೋದಿ ಇಂದು ಸಂವಾದಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.