ನವದೆಹಲಿ: ಇತ್ತೀಚಿನ ದಿನಗಳಲ್ಲಿ ಮನೆ ಬಾಗಿಲಿಗೆ ಬಂದು ಮತ ಪ್ರಚಾರ ಮಾಡುವುದಕ್ಕಿಂತ ಹೆಚ್ಚಾಗಿ ಸಾಮಾಜಿಕ ಜಾಲತಾಣ, ಫೋನ್ಗಳ ಮೂಲಕ ರಾಜಕೀಯ ಪಕ್ಷಗಳು ಮತದಾರರಿಗೆ ಹೆಚ್ಚು ಹತ್ತಿರವಾಗಲು ಪ್ರಯತ್ನಿಸುತ್ತಿವೆ. ಇದಕ್ಕಾಗಿ ರಾತ್ರಿ, ಹಗಲೆನ್ನದೆ ಸಂದೇಶ, ಕರೆಗಳನ್ನು ಮಾಡಿ ಕಾಟ ಕೊಡುತ್ತವೆ.
ರಾಜಕೀಯ ಪಕ್ಷಗಳ ಈ ಧೋರಣೆಗೆ ಕಾಡಿವಾಣ ಹಾಕಲು ಚುನಾವಣಾ ಆಯೋಗ ಮುಂದಾಗಿದ್ದು, ರಾಜಕೀಯ ಪಕ್ಷಗಳು ರಾತ್ರಿ ವೇಳೆಯಲ್ಲಿ ಮತದಾರರಿಗೆ ಫೋನಾಯಿಸಿ ಅಥವಾ ಸಂದೇಶಗಳನ್ನು ರವಾನಿಸಿ ಮತ ಕೇಳಬಾರದು, ಇದರಿಂದ ಅವರ ಖಾಸಗೀತನಕ್ಕೆ ಧಕ್ಕೆಯಾಗುತ್ತದೆ ಎಂದು ತಾಕೀತು ಮಾಡಿದೆ.
ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಯಾವುದೇ ರಾಜಕೀಯ ಪಕ್ಷಗಳು ಮತದಾರರಿಗೆ ಫೋನಾಯಿಸುವುದು, ವಾಟ್ಸಾಪ್ ಸಂದೇಶ, ಮೆಸೇಜ್ಗಳನ್ನು ರವಾನಿಸುವುದು ಮಾಡಬಾರದು ಎಂದು ಚುನಾವಣಾ ಆಯೋಗ ನಿರ್ಬಂಧ ವಿಧಿಸಿದೆ. ಅಷ್ಟೇ ಅಲ್ಲ, ಈ ಸಮಯದಲ್ಲಿ ಮನೆಗೆ ಹೋಗಿ ಮತ ಕೇಳುವುದು, ಧ್ವನಿವರ್ಧಕ ಬಳಸಿ ಪ್ರಚಾರ ಮಾಡುವುದು ಕೂಡ ಸಲ್ಲದು ಎಂದು ಸ್ಪಷ್ಟಪಡಿಸಿದೆ.
ನಾಗರಿಕರ ಖಾಸಗೀತನವನ್ನು ಗೌರವಿಸುವಂತೆ ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಕಿವಿಮಾತು ಹೇಳಿದೆ.
source; kannadaprabha
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.