ಮಾಂಚೆಸ್ಟರ್: ಭೂಮಿಯನ್ನು ಹಸಿರಾಗಿಸದಿದ್ದರೆ ಉಳಿಗಾಲವಿಲ್ಲ ಎಂಬುದು ಇಡೀ ಜಗತ್ತಿಗೆ ಅನ್ವಯಿಸುವ ಸತ್ಯ. ಭಾರತ ಮಾತ್ರವಲ್ಲ, ಎಲ್ಲಾ ದೇಶಗಳೂ ಪ್ರಕೃತಿಯನ್ನು ಉಳಿಸಲು ಏನಾದರು ಮಾಡಲೇ ಬೇಕಾದ ಪರಿಸ್ಥಿತಿಯಲ್ಲಿವೆ. ಯುಕೆಯ ಮೂರನೇ ರಾಜಧಾನಿ ಎಂದು ಕರೆಯಲ್ಪಡುವ ಮಾಂಚೆಸ್ಟರ್ ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನಿಟ್ಟಿದೆ.
ಈ ನಗದರಲ್ಲಿ ಪ್ರತಿ ವ್ಯಕ್ತಿಗೊಂದರಂತೆ ಗಿಡ ನೆಡುವ ಯೋಜನೆಯನ್ನು ಹಮ್ಮಿಕೊಂಡಿದೆ. ಇಲ್ಲಿ 3 ಮಿಲಿಯನ್ ಜನರಿದ್ದು, 3 ಮಿಲಿಯನ್ ಗಿಡಗಳನ್ನು ನೆಡಲು ಉದ್ದೇಶಿಸಲಾಗಿದೆ.
ಸಮುದಾಯ ಭಾಗವಹಿಸುವಿಕೆಯ ಮೂಲಕ ಈ ಯೋಜನೆ ಅನುಷ್ಠಾನಕ್ಕೆ ಬರಲಿದೆ. ಶಾಲಾ ಕಾಲೇಜುಗಳಲ್ಲಿ, ರಸ್ತೆಯ ಇಕ್ಕೆಲಗಳಲ್ಲಿ, ಖಾಲಿ ಜಾಗಗಳಲ್ಲಿ ಹೀಗೆ ಎಲ್ಲಾ ಕಡೆಗಳಲ್ಲೂ ಗಿಡಗಳನ್ನು ನೆಡಲಾಗುತ್ತಿದೆ.
ಎಲ್ಲಾ ನಗರ, ಎಲ್ಲಾ ದೇಶಗಳಲ್ಲೂ ಈ ರೀತಿಯ ಯೋಜನೆ ಜಾರಿಗೆ ಬಂದರೆ ಇಡೀ ವಿಶ್ವ ಹಸಿರಾಗಿ ನಳನಳಿಸುವಲ್ಲಿ ಸಂಶಯವಿಲ್ಲ.
source; NEWSBHARATI
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.