ರಾಯ್ಪುರ: ಅಧಿಕೃತ ಟ್ವಿಟರ್ ಖಾತೆಯಲ್ಲಿ ಕಾಶ್ಮೀರವಿಲ್ಲದ ಭಾರತದ ಭೂಪಟವನ್ನು ಹಾಕಿರುವ ಛತ್ತೀಸ್ಗಢ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರಕರಣ ದಾಖಲು ಮಾಡಿದೆ.
ಛತ್ತೀಸ್ಗಢ ಕಾಂಗ್ರೆಸ್ನ ಟ್ವಿಟರ್ ಖಾತೆಯಲ್ಲಿ ಕಾಶ್ಮೀರವಿಲ್ಲದ ಭಾರತದ ಭೂಪಟ ಪ್ರಕಟಗೊಂಡಿದೆ ಎನ್ನಲಾಗಿದೆ. ಇದೀಗ ಬಿಜೆಪಿ ಈ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ಪ್ರಕರಣ ದಾಖಲು ಮಾಡಿದೆ.
ಇನ್ನೊಂದೆಡೆ ಕಾಂಗ್ರೆಸ್ ಈ ಘಟನೆಯ ಬಗ್ಗೆ ಕ್ಷಮಾಪಣೆ ಕೇಳಿದೆ.
ಕೆಲವೊಂದು ದೋಷದಿಂದಾಗಿ ಈ ರೀತಿಯ ಅಚಾತುರ್ಯ ನಡೆದಿದೆ. ಭೂಪಟವನ್ನು ತಕ್ಷಣವೇ ತೆಗೆದು ಹಾಕಲಾಗಿದೆ. ಕಾಂಗ್ರೆಸ್ ದೇಶದ ಏಕತೆಗಾಗಿ ಸದಾ ಎದ್ದು ನಿಲ್ಲುತ್ತದೆ ಎಂದು ಛತ್ತೀಸ್ಗಢ ಕಾಂಗ್ರೆಸ್ ಮುಖಂಡ ಜಯವರ್ಧನ್ ಬಿರ್ಸಾ ಹೇಳಿದ್ದಾರೆ.
source; India.com
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.