ಗುವಾಹಟಿ: ಕಳೆದ 3 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದ 31 ಅಕ್ರಮ ಬಾಂಗ್ಲಾ ವಲಸಿಗರನ್ನು ಗುವಾಹಟಿಯಲ್ಲಿ ಬಂಧನಕ್ಕೊಳಪಡಿಸಲಾಗಿದೆ. ತಮ್ಮ ತವರು ಬಾಂಗ್ಲಾದೇಶಕ್ಕೆ ವಾಪಾಸ್ ತೆರಳುತ್ತಿದ್ದ ಸಂದರ್ಭದಲ್ಲಿ ಮಾರ್ಗಮಧ್ಯೆ ಇವರ ಬಂಧನವಾಗಿದೆ.
ತ್ರಿಪುರಾದ ಮೂಲಕ ಬಾಂಗ್ಲಾಗೆ ತೆರಳುವ ಸಲುವಾಗಿ ಇವರು ಗುವಾಹಟಿ ರೈಲು ನಿಲ್ದಾಣಕ್ಕೆ ಆಗಮಿಸಿದ್ದರು. ಅಲ್ಲಿ ‘ಕಾಂಚನಜುಂಗ ಎಕ್ಸ್ಪ್ರೆಸ್’ ರೈಲನ್ನು ಏರಿ ಅಗರ್ತಾಲಕ್ಕೆ ತೆರಳುವ ಯೋಜನೆ ಇವರದ್ದಾಗಿತ್ತು. ಅಗರ್ತಾಲದಿಂದ ಕಳ್ಳ ದಾರಿಯಲ್ಲಿ ಬಾಂಗ್ಲಾಕ್ಕೆ ತೆರಳುವವರಿದ್ದರು. ಆದರೆ ಅಸ್ಸಾಂ ಪೊಲೀಸರು ಗುವಾಹಟಿಯಲ್ಲೇ ಇವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.
8 ಮಹಿಳೆಯರು, 13 ಮಕ್ಕಳು ಸೇರಿ 31 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ಬಾಂಗ್ಲಾದ ಬಗೇರ್ಹತ್ ಜಿಲ್ಲೆಯವರೆಂದು ತಿಳಿದು ಬಂದಿದೆ. 3 ವರ್ಷಗಳಿಂದ ಬೆಂಗಳೂರಿನಲ್ಲಿ ಸಣ್ಣ ಪುಟ್ಟ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು ಎನ್ನಲಾಗಿದೆ.
ಇವರಿಂದ ಇನ್ನಷ್ಟು ಮಾಹಿತಿಯನ್ನು ಸಂಗ್ರಹಿಸಿ ಬಾಂಗ್ಲಾ ಸರ್ಕಾರಕ್ಕೆ ಇವರನ್ನು ಹಸ್ತಾಂತರ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಮೂಲಗಳ ಪ್ರಕಾರ, ಕರ್ನಾಟಕದಲ್ಲ್ಲಿ ಸುಮಾರು 748 ಅಕ್ರಮ ಬಾಂಗ್ಲಾ ವಲಸಿಗರಿದ್ದಾರೆ. ಇವರಲ್ಲಿ ಬಹುತೇಕರು ಬೆಂಗಳೂರಿನಲ್ಲೇ ಇದ್ದಾರೆ. ಸರ್ಕಾರದ ಇಚ್ಛಾಶಕ್ತಿಯ ಕೊರತೆಯಿಂದಾಗಿ ಇವರನ್ನು ಪತ್ತೆ ಹಚ್ಚುವುದು ಕಷ್ಟವಾಗುತ್ತಿದೆ.
source;ANI
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.