ಗಣರಾಜ್ಯೋತ್ಸವದ ದಿನ ಉತ್ತರಪ್ರದೇಶದ 3 ಕೋಟಿ ಮನೆಗಳು ಕಮಲದ ದೀಪದಿಂದ ಪ್ರಜ್ವಲಿಸಲಿದೆ. ಬಿಜೆಪಿ ಕಾರ್ಯಕರ್ತರು ಸರ್ಕಾರದ ಯೋಜನೆಗಳ ಫಲಾನುಭವಿಗಳನ್ನು ಭೇಟಿಯಾಗಿ ಅವರಿಗೆ ಈ ದೀಪಗಳನ್ನು ಉಡುಗೊರೆ ನೀಡಲಿದ್ದಾರೆ.
ಲಕ್ನೋ: ಈ ಬಾರಿಯ ಗಣರಾಜ್ಯೋತ್ಸವವನ್ನು ಅತ್ಯಂತ ವಿಭಿನ್ನವಾಗಿ ಆಚರಣೆ ಮಾಡಲು ಉತ್ತರಪ್ರದೇಶ ಬಿಜೆಪಿ ನಿರ್ಧರಿಸಿದೆ. ವಿವಿಧ ಸರ್ಕಾರಿ ಯೋಜನೆಗಳ ಸುಮಾರು 3 ಕೋಟಿ ಫಲಾನುಭವಿಗಳ ಮನೆಗಳನ್ನು ಕಮಲದ ಚಿಹ್ನೆಯ ದೀಪದಿಂದ ಬೆಳಗಿಸುವ ಮೂಲಕ ಗಣರಾಜ್ಯೋತ್ಸವ ಆಚರಣೆಗೆ ಸಿದ್ಧತೆಗಳನ್ನು ನಡೆಸಲಾಗಿದೆ.
‘ಕಮಲ ಜ್ಯೋತಿ ವಿಕಾಸ ಅಭಿಯಾನ’ದ ಅಡಿಯಲ್ಲಿ ಬಿಜೆಪಿ ಕಾರ್ಯಕರ್ತರು ಸರ್ಕಾರಿ ಯೋಜನೆಯ ಪಲಾನುಭವಿಗಳಾದ ಸುಮಾರು 3 ಕೋಟಿ ಕುಟುಂಬಗಳನ್ನು ಭೇಟಿಯಾಗಲಿದ್ದಾರೆ ಮತ್ತು ಅವರಿಗೆ ಕಮಲದ ಆಕಾರದ ದೀಪವನ್ನು, ಅದರೊಂದಿಗೆ ಸರ್ಕಾರಿ ಯೋಜನೆಗಳ ಮಾಹಿತಿ ಇರುವ ಕೈಪಿಡಿಯನ್ನು ಉಡುಗೊರೆಯಾಗಿ ನೀಡಲಿದ್ದಾರೆ.
ಜ.26ರಂದು ನಿಗದಿತ ವೇಳೆಯಲ್ಲಿ ಈ ದೀಪವನ್ನು ಉರಿಸುವಂತೆ ಮನವಿಯನ್ನು ಮಾಡಿಕೊಳ್ಳಲಾಗುತ್ತದೆ ಮತ್ತು 2019ರಲ್ಲಿ ಮತ್ತೆ ಮೋದಿ ಸರ್ಕಾರವನ್ನು ಅಧಿಕಾರಕ್ಕೆ ತರುವಂತೆ ಪ್ರಮಾಣ ಮಾಡಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
source; timesnownews.com
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.