ನವೆಂಬರ್ 1ರಿಂದ ರಾಜ್ಯದ ಎಲ್ಲಾ ಸರ್ಕಾರಿ ಕಡತಗಳು ಕನ್ನಡದಲ್ಲಿರಲಿವೆ. ಈ ನಿಟ್ಟಿನಲ್ಲಿ ಸಿಎಂ ಕುಮಾರಸ್ವಾಮಿಯವರು ಸ್ಪಷ್ಟ ಸೂಚನೆಯನ್ನು ನೀಡಿದ್ದಾರೆ.
ಬೆಂಗಳೂರು: ನವೆಂಬರ್ 1ರಿಂದ ಮುಖ್ಯಮಂತ್ರಿ ಕುಮಾರಸ್ವಾಮಿ ಮುಂದುಗಡೆ ಬರುವ ಎಲ್ಲಾ ಸರ್ಕಾರಿ ಕಡತಗಳು ಕನ್ನಡದಲ್ಲಿರುವುದು ಕಡ್ಡಾಯವಾಗಿದೆ. ಇಲ್ಲವಾದರೆ ಅವುಗಳನ್ನು ಸಿಎಂ ಅವರು ವಾಪಾಸ್ ಕಳುಹಿಸಲಿದ್ದಾರೆ.
ನ.1ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳು ಸರ್ಕಾರಿ ಕಡತಗಳು ಕನ್ನಡದಲ್ಲಿರಬೇಕು ಎಂಬ ನಿಯಮವನ್ನು ಅನುಷ್ಠಾನಗೊಳಿಸುತ್ತಿದ್ದಾರೆ.
ಅಂತರ್ ರಾಜ್ಯ ಕಡತ, ಸುಪ್ರೀಂಕೋರ್ಟ್, ಹೈಕೋರ್ಟ್ಗಳಿಗೆ ಸಂಬಂಧಿಸಿದ ಕಡತಗಳನ್ನು ಹೊರತುಪಡಿಸಿ ಉಳಿದೆಲ್ಲಾ ಕಡತಗಳು ಕನ್ನಡದಲ್ಲಿರಲಿವೆ.
ಈಗಾಗಲೇ ಸರ್ಕಾರಿ ಕಡತಗಳು ಕ್ನನಡದಲ್ಲಿರಬೇಕು ಎಂಬ ಆದೇಶವಿದೆ, ಇದನ್ನು ಅನುಷ್ಠಾನಕ್ಕೆ ತರಲಾಗುತ್ತಿದೆಯಷ್ಟೇ. ಆದರೆ ಈ ಬಗ್ಗೆ ಇನ್ನೊಂದು ಸುತ್ತಿನ ಸುತ್ತೋಲೆಯನ್ನು ಕಳುಹಿಸಲಾಗುತ್ತಿಲ್ಲ ಎಂದು ಸರ್ಕಾರಿ ಮೂಲಗಳು ಸ್ಪಷ್ಟಪಡಿಸಿವೆ.
source; Bangloremirror
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.