ಡಿಜಿಟಲ್ ಇಂಡಿಯಾದ ಯಶಸ್ಸಿನಲ್ಲಿ ಮೊಬೈಲ್ ಫೋನ್ ಅತೀ ಮುಖ್ಯ ಭಾಗವಾಗಿದೆ, ಮೊಬೈಲ್ಗಳು ನಾಗರಿಕರ ಸಬಲೀಕರಣಕ್ಕೆ ಕಾರಣವಾಗುತ್ತಿದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ‘ಇಂಡಿಯಾ ಮೊಬೈಲ್ ಕಾಂಗ್ರೆಸ್’ನಲ್ಲಿ ಹೇಳಿದರು.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಆರಂಭಿಸಿರುವ ಡಿಜಿಟಲ್ ಇಂಡಿಯಾದ ಯಶಸ್ಸಿನಲ್ಲಿ ಮೊಬೈಲ್ ಫೋನುಗಳು ಬಹುಮುಖ್ಯ ಭಾಗವಾಗಿವೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಇಂಡಿಯಾ ಮೊಬೈಲ್ ಕಾಂಗ್ರೆಸ್ನ್ನು ಉದ್ದೇಶಿಸಿ ಮಾತನಾಡಿದ ಅವರು, ಸೂಕ್ತ ದಾರಿಯಲ್ಲಿ ಸಾಮಾನ್ಯ ಜನರನ್ನು ಕನೆಕ್ಟ್ ಆಗುವ ಆಧುನಿಕ ತಂತ್ರಜ್ಞಾನದ ಅಗತ್ಯತೆ ಭಾರತಕ್ಕೆ ಇದೆ ಎಂದು ಅವರು ಪ್ರತಿಪಾದಿಸಿದ್ದಾರೆ.
ಮುಂಬರುವ ದಿನಗಳಲ್ಲಿ ಡಿಜಿಟಲ್ ಎಕನಾಮಿಯತ್ತ ಇನ್ನಷ್ಟು ಮುನ್ನಡೆಯಲು ನಮಗೆ ವಿವಿಧ ಭಾರತೀಯ ಭಾಷೆಗಳಲ್ಲಿ ಡಿಜಿಟಲ್ ವಿಷಯಗಳು ಇರಬೇಕಾದ ಅಗತ್ಯವಿದೆ ಎಂದರು.
ಡಾಟಾ ಪ್ರೈವಸಿಯ ಬಗ್ಗೆ ಮಾತನಾಡಿದ ಅವರು, ಡಾಟಾ ಭಾರತದ ಹೊಸ ಆಸ್ತಿ ಎಂದು ಬಣ್ಣಿಸಿದರು. ಅದರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ ಎಂದರು.
ಭಾರತೀಯ ಮಾರುಕಟ್ಟೆಯಲ್ಲಿ ಮೊಬೈಲ್ ಫೋನ್ಗಳನ್ನು ಪರಿಚಯಿಸಿದ್ದರಿಂದ ನಾಗರಿಕ ಸಬಲೀಕರಣವಾಗಿದೆ ಎಂದ ಅವರು, ಭಾರತ ವಿಶ್ವದಲ್ಲೇ ಅತೀಹೆಚ್ಚಿನ ಮೊಬೈಲ್ ಸಾಂದ್ರತೆಯನ್ನು ಹೊಂದಿದೆ ಎಂದಿದ್ದಾರೆ.
source: ANI
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.