ನವದೆಹಲಿ: ಹಲವಾರು ಸವಾಲುಗಳ ನಡುವೆಯೂ ಕೇಂದ್ರ ಸರ್ಕಾರದ ಅತೀ ಮಹತ್ವಾಕಾಂಕ್ಷೆಯ, ವಿಶ್ವದ ಅತೀದೊಡ್ಡ ಆರೋಗ್ಯ ಯೋಜನೆ ‘ಆಯುಷ್ಮಾನ್ ಭಾರತ್’ ಮುನ್ನಡೆಯುತ್ತಿದೆ. ಆದರೆ ದೇಶದ ಸುಮಾರು 500 ಮಿಲಿಯನ್ ಅರ್ಹ ಫಲಾನುಭವಿಗಳಿಗೆ ಈ ಯೋಜನೆಯ ಬಗ್ಗೆ ಇನ್ನೂ ಕಿಂಚಿತ್ತೂ ಮಾಹಿತಿ ಇಲ್ಲ.
ಈ ಸಮಸ್ಯೆಯನ್ನು ಬುಡದಿಂದಲೇ ಕಿತ್ತು ಹಾಕಲು ಪ್ರಧಾನಿ ನರೇಂದ್ರ ಮೋದಿ ಕಾರ್ಯಪ್ರವೃತ್ತರಾಗಿದ್ದು, ಯೋಜನೆಯ ಪ್ರಯೋಜನಗಳನ್ನು ತಿಳಿಸಿಕೊಡುವ ಸಲುವಾಗಿಯೇ ದೇಶದ 100 ಮಿಲಿಯನ್ ಕುಟುಂಬಗಳಿಗೆ ಅವರು ಪತ್ರವನ್ನು ಬರೆಯುತ್ತಿದ್ದಾರೆ. ಸಾಮಾಜಿಕ ಆರ್ಥಿಕ ಜಾತಿ ಜನಗಣತಿಯ ಆಧಾರದಲ್ಲಿ ತಳಮಟ್ಟದಲ್ಲಿರುವ ಜನಸಂಖ್ಯೆಗೆ ಪತ್ರ ಬರೆಯಲಾಗುತ್ತಿದೆ.
ಪ್ರಧಾನಿ 10 ಕೋಟಿ ಕುಟುಂಬಗಳಿಗೆ ಆಯುಷ್ಮಾನ್ ಯೋಜನೆಯ ಪ್ರಯೋಜನಗಳ ಬಗ್ಗೆ ತಿಳಿಸಿಕೊಡಲು ಪತ್ರ ಬರೆಯುತ್ತಿದ್ದಾರೆ ಎಂಬ ವಿಷಯವನ್ನು ನೀತಿ ಆಯೋಗದ ಸದಸ್ಯ ವಿನೋದ್ ಕೆ ಪೌಲ್ ಅವರು ದೃಢಪಡಿಸಿದ್ದಾರೆ.
‘ಸೇವೆಯನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಇದೊಂದು ದೊಡ್ಡ ಹೆಜ್ಜೆ. ‘ಆಯುಷ್ಮಾನ್ ಭಾರತ್’ ವೆಚ್ಚ ತಗ್ಗಿಸುವ ಮೂಲಕ ದೇಶದ ಆರೋಗ್ಯ ವ್ಯವಸ್ಥೆಯನ್ನು ಇದು ಸುಧಾರಿಸಲಿದೆ. ಯೋಜನೆಯಿಂದ ಹಲವಾರು ಉದ್ಯೋಗಗಳು ಸೃಷ್ಟಿಯಾಗಲಿದ್ದು, ಪ್ರಗತಿಗೂ ನೆರವಾಗಲಿದೆ’ ಎಂದು ಪೌಲ್ ಹೇಳಿದ್ದಾರೆ.
source:NDTV
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.