ನವದೆಹಲಿ: ಪಾಕಿಸ್ಥಾನ ಆಕ್ರಮಿತ ಕಾಶ್ಮೀರದಲ್ಲಿರುವ ಶಾರದಾ ಸರ್ವಜ್ಞ ಪೀಠಕ್ಕೆ ತೆರಳಲು ಅವಕಾಶ ಕಲ್ಪಿಸಿಕೊಡಬೇಕೆಂದು ಕೋರಿ ಶೃಂಗೇರಿ ಮಠದ ಆಡಳಿತಾಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.
ಶಾರದಾ ಸರ್ವಜ್ಞ ಪೀಠವನ್ನು ಪುನರುಜ್ಜೀವನಗೊಳಿಸಲು ಮತ್ತು ಪ್ರತಿವರ್ಷ ಭಕ್ತರು ಅಲ್ಲಿಗೆ ತೆರಳಲು ಅನುವು ಮಾಡಿಕೊಡಬೇಕು ಎಂದು ಪತ್ರದಲ್ಲಿ ಆಡಳಿತಾಧಿಕಾರಿ ಡಾ.ವಿ.ಆರ್ ಗೌರಿಶಂಕರ್ ಮನವಿ ಮಾಡಿಕೊಂಡಿದ್ದಾರೆ.
ಶಂಕರಾಚಾರ್ಯರು ಸನಾತನ ಧರ್ಮದ ಪ್ರಚಾರಕ್ಕಾಗಿ ಭರತ ಖಂಡದೆಲ್ಲೆಡೆ ಸಂಚಾರ ಮಾಡಿದಾಗ ಕಾಶ್ಮೀರದಲ್ಲಿ ಶಾರದಾ ಸರ್ವಜ್ಞ ಪೀಠವನ್ನು ಕಂಡರು. ಬಳಿಕ ಅಲ್ಲಿನ ವಿದ್ವಾಂಸರೊಂದಿಗೆ ವಾದದಲ್ಲಿ ಜಯಿಸಿ ಪೀಠವನ್ನು ಏರುವ ಅವಕಾಶವನ್ನು ಗಿಟ್ಟಿಸಿದ್ದರು. ಇಂತಹ ಇತಿಹಾಸವುಳ್ಳ ಪೀಠ ಪ್ರಸ್ತುತ ಪಿಓಕೆಯಲ್ಲಿದೆ. ಇಲ್ಲಿಗೆ ಪ್ರತಿವರ್ಷ ಭಕ್ತರಿಗೆ ತರಳಲು ಮತ್ತು ಅದರ ಪುನರುಜ್ಜೀವನಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಪ್ರಧಾನಿ ಮೋದಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಶಾರದಾ ಪೀಠ ಇರುವ ಪಿಓಕೆಯ ಗ್ರಾಮವನ್ನು ಶಾರದಾ ಗ್ರಾಮ ಎಂದೇ ಕರೆಯಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.