ತಿರುವನಂತಪುರಂ: ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಸುಪ್ರೀಂಕೋರ್ಟ್ ತೀರ್ಪನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ವೇಳೆ ಕೇರಳ ಸರ್ಕಾರ ನಡೆದುಕೊಂಡ ರೀತಿಗೆ ಕೇರಳ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಇದುವರೆಗೆ ಸುಮಾರು 2 ಸಾವಿರ ಪ್ರತಿಭಟನಾಕಾರರನ್ನು ಬಂಧಿಸಿರುವುದಾಗಿ ಕೇರಳ ಸರ್ಕಾರ ಹೇಳಿದೆ. ಸರ್ಕಾರದ ಈ ಕ್ರಮಕ್ಕ ಹೈಕೋರ್ಟ್ ಕಿಡಿಕಾರಿದ್ದು, ಅಮಾಯಕರ ಬಂಧನವಾದರೆ ಸಹಿಸಲು ಸಾಧ್ಯವಿಲ್ಲ ಎಂಬ ಎಚ್ಚರಿಕೆಯನ್ನು ರವಾನಿಸಿದೆ.
ಕಾನೂನು ಬಾಹಿರ ರೀತಿಯನ್ನು ಪ್ರತಿಭಟನಾಕಾರರ ಬಂಧನವಾದ ಬಗ್ಗೆ ಮಾಹಿತಿಗಳು ಲಭಿಸುತ್ತಿವೆ, ಒಂದು ವೇಳೆ ಇದು ನಿಜವೇ ಆದರೆ ಸರ್ಕಾರ ತೀವ್ರ ಸ್ವರೂಪದ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಹೈಕೋರ್ಟ್ ಹೇಳಿದೆ.
ಇದುವರೆಗೆ ಸುಮಾರು 2 ಸಾವಿರ ಪ್ರತಿಭಟನಾಕಾರರನ್ನು ಸರ್ಕಾರ ಬಂಧಿಸಿದೆ, ಅಲ್ಲದೇ ಪ್ರತಿಭಟನೆಯ ವೀಡಿಯೋ ರೆಕಾರ್ಡ್ ಮಾಡಿ ಪ್ರತಿಭಟನಾಕಾರರ ಮುಖಚಹರೆಯನ್ನು ಪತ್ತೆ ಮಾಡಿ ಬಂಧನ ಪ್ರಕ್ರಿಯೆಯನ್ನು ಮುಂದುವರೆಸಿದೆ. ಇದನ್ನು ವಿರೋಧಿಸಿ ಪಟ್ಟಣಂತಿಟ್ಟದ ಇಬ್ಬರು ನಿವಾಸಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ಬಗ್ಗೆ ತೀರ್ಪು ನೀಡಿರುವ ಹೈಕೋರ್ಟ್, ಬಂಧಿತ ಆರೋಪಿಯ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳು ಇದ್ದರಷ್ಟೇ ಬಂಧನವಾಗಬೇಕು, ಇಲ್ಲವಾದರೆ ತೀವ್ರ ತರನಾದ ಪರಿಣಾಮ ಎದುರಿಸಬೇಕಾಗುತ್ತದೆ ಎಂದಿದೆ.
source: ZEENEWS
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.