ನವದೆಹಲಿ: ಸರ್ಕಾರಿ ಸ್ವಾಮ್ಯದ ದೂರದರ್ಶನದಲ್ಲಿ ಕಾರ್ಯನಿರ್ವಹಿಸುವ ಪತ್ರಕರ್ತರು ಸೇನಾ ಜವಾನರಂತೆಯೇ ದೇಶಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಹೇಳಿದ್ದಾರೆ.
ನಕ್ಸಲರ ದಾಳಿಗೆ ಬಲಿಯಾದ ದೂರದರ್ಶನ ಕ್ಯಾಮೆರಾಮೆನ್ ಅಚ್ಯುತಾನಂದ್ ಸಾಹು ಅವರ ಸ್ಮರಣಾರ್ಥ ಪ್ರಸಾರ ಭಾರತಿ ನವದೆಹಲಿಯಲ್ಲಿ ಗುರುವಾರ ಆಯೋಜಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
‘ದೇಶದಲ್ಲಿ ಸಾಕಷ್ಟು ಮಾಧ್ಯಮಗಳಿವೆ, ಆದರೆ ದೂರದರ್ಶನ ಮತ್ತು ಡಿಡಿ ನ್ಯೂಸ್ ರಾಷ್ಟ್ರೀಯ ಪ್ರಸಾರಕಗಳಾಗಿವೆ. ಸೇನೆಯ ಜವಾನರಂತೆಯೇ ಇಲ್ಲಿನ ಪತ್ರಕರ್ತರೂ ದೇಶ ಸೇವೆಯಲ್ಲಿ ನಿರತರಾಗಿದ್ದಾರೆ. ಕ್ಯಾಮೆರಾ ಅಥವಾ ಪೆನ್ ಯಾವುದೇ ಕಾರ್ಯದಲ್ಲೂ ಅತೀ ಕಠಿಣ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಇಡೀ ದೇಶಕ್ಕೆ ಸುದ್ದಿ ಮುಟ್ಟಿಸುವ ಕಾರ್ಯ ಅವರದ್ದಾಗಿರುತ್ತದೆ’ ಎಂದಿದ್ದಾರೆ.
ನಿಧಾನಕ್ಕಾದರೂ ಜನರು ಪತ್ರಕರ್ತರು ಎದುರಿಸುತ್ತಿರುವ ಸವಾಲುಗಳನ್ನು ಅರಿತುಕೊಳ್ಳುತ್ತಿದ್ದಾರೆ ಎಂದರು.
ಸಾಹು ಅವರು ಶ್ರಮಜೀವಿಯಾಗಿದ್ದು, ವೃತ್ತಿಯ ಬಗೆಗೆ ಅಪಾರ ಗೌರವ ಹೊಂದಿದ್ದರು. ದೇಶ ಮತ್ತು ವೃತ್ತಿಗೆ ಬದ್ಧರಾಗಿರುತ್ತಿದ್ದರು. ಅದಕ್ಕಾಗಿಯೇ ಇಂದು ಅವರು ಜೀವವನ್ನೂ ಕಳೆದುಕೊಂಡಿದ್ದಾರೆ ಎಂದರು.
source: NDTV
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.