ಲಕ್ನೋ: ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಅವರು, ಮಂಗಳವಾರ ಲಕ್ನೋದಲ್ಲಿ ನಿರ್ಮಾಣಗೊಂಡಿರುವ ‘ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ’ನ್ನು ಲೋಕಾರ್ಪನೆಗೊಳಿಸಿದರು.
ಈ ವೇಳೆ ಮಾತನಾಡಿದ ಯೋಗಿ, ವಾಜಪೇಯಿ ಅವರ ದೂರದೃಷ್ಟಿತ್ವ ಮತ್ತು ಜನರ ಕಲ್ಯಾಣಕ್ಕಾಗಿ ಅವರು ಮಾಡಿದ ಕಾರ್ಯಗಳನ್ನು ಕೊಂಡಾಡಿದರು.
ಸ್ಟೇಡಿಯಂ ನಿರ್ಮಾಣಕ್ಕೆ ಶ್ರಮಿಸಿದ ಉತ್ತರಪ್ರದೇಶ ಕ್ರಿಕೆಟ್ ಅಸೋಸಿಯೇಶನ್, ರಾಜ್ಯದ ಜನತೆಯನ್ನು ಅಭಿನಂದಿಸಿದ ಅವರು, ಈ ನೆಲದಲ್ಲಿ ಕ್ರಿಕೆಟ್ ಆಯೋಜನೆಗೊಳಿಸಲು ಈ ಸ್ಟೇಡಿಯಂ ಅವಕಾಶ ಕಲ್ಪಿಸಿಕೊಟ್ಟಿದೆ ಎಂದಿದ್ದಾರೆ.
source: ANI
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.