ನವದೆಹಲಿ: ಜಮ್ಮು ಕಾಶ್ಮೀರದ ಯುವ ಜನತೆಯನ್ನು ದಾರಿ ತಪ್ಪಿಸುತ್ತಿರುವ ಸಮಾಜಘಾತುಕ ಶಕ್ತಿಗಳಿಗೆ ಸೇನಾಮುಖ್ಯಸ್ಥ ಬಿಪಿನ್ ರಾವತ್ ಅವರು ಕಟು ಎಚ್ಚರಿಕೆಯನ್ನು ರವಾನಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಕೆಲವೊಂದು ಮಸೀದಿ ಮತ್ತು ಮದರಸಗಳಲ್ಲಿ ಮೌಲ್ವಿಗಳು ಯುವಜನತೆಗೆ ತಮ್ಮ ಮಾಹಿತಿಗಳನ್ನು ನೀಡುತ್ತಿದ್ದಾರೆ’ ಎಂದಿದ್ದಾರೆ.
ಕೆಲವೊಂದು ಮಸೀದಿಗಳಲ್ಲಿ ಹರಡಲಾಗುವ ವದಂತಿಗಳನ್ನು ನಂಬಿ ನೂರಾರು ಯುವಕರು ಬೀದಿಗಳಲ್ಲಿ ನಿಂತು ಕಲ್ಲು ತೂರಾಟವನ್ನು ನಡೆಸುತ್ತಿದ್ದಾರೆ, ಸೇನಾಪಡೆಗಳ ವಿರುದ್ಧ, ಸರ್ಕಾರಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದಿದ್ದಾರೆ.
ಜಮ್ಮು ಕಾಶ್ಮೀರ ಜನತೆಗೆ ಶಸ್ತ್ರಾಸ್ತ್ರ ಕೈಗೆತ್ತಿಕೊಳ್ಳದಂತೆ ಮನವಿ ಮಾಡಿಕೊಂಡಿರುವ ಅವರು, ಕುಟುಂಬಿಕರು ಭಯೋತ್ಪಾದಕ ಸಂಘಟನೆ ಸೇರದಂತೆ ತಮ್ಮ ಯುವಕರಿಗೆ ತಿಳಿ ಹೇಳಬೇಕಿದೆ, ಅವರನ್ನು ದಾರಿ ತಪ್ಪದಂತೆ ನೋಡಿಕೊಳ್ಳಬೇಕಿದೆ ಎಂದರು. ಒಂದು ವೇಳೆ ಮಾತು ಹೇಳದಿದ್ದರೆ ತಕ್ಕ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಭಯೋತ್ಪಾದಕರಿಗೆ ಹಿಂಸಾಚಾರ ಸೃಷ್ಟಿಸಲು ಅವಕಾಶ ನೀಡುವುದಿಲ್ಲ ಎಂಬ ವಿಷಯದಲ್ಲಿ ಸರ್ಕಾರ ಸ್ಪಷ್ಟವಾಗಿದೆ. ಅಲ್ಲದೇ ಕಣಿವೆಯ ಜನರಿಗೆ ಮಾತುಕತೆ ನಡೆಸಲು ಸಂವಾದಕರನ್ನೂ ನೇಮಿಸಿದೆ ಎಂದಿದ್ದಾರೆ.
source: zeenews
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.