ನವದೆಹಲಿ: ಭಾರತೀಯ ಮಹಿಳಾ ಕ್ರಿಕೆಟ್ ಟಿ20 ಕ್ಯಾಪ್ಟನ್ ಹರ್ಮನ್ಪ್ರೀತ್ ಕೌರ್ ಅವರು ಉದಾತ್ತ ಕಾರಣಕ್ಕಾಗಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಶ್ಲಾಘನೆಗೆ ಪಾತ್ರರಾಗುತ್ತಿದ್ದಾರೆ.
ಗಯಾನದಲ್ಲಿ ನಡೆಯುತ್ತಿರುವ ವರ್ಲ್ಡ್ ಟಿ20 ಕ್ರೀಡಾಕೂಟದಲ್ಲಿ ಪಾಕಿಸ್ಥಾನ ವಿರುದ್ಧದ ಪಂದ್ಯದ ಸಂದರ್ಭದಲ್ಲಿ ಪುಟಾಣಿ ಬಾಲಕಿಯೊಬ್ಬಳನ್ನು ಎತ್ತಿಕೊಂಡು ಹೋಗುತ್ತಿರುವ ಕೌರ್ ಅವರ ವೀಡಿಯೋ ಈಗ ಎಲ್ಲೆಡೆಯೂ ವೈರಲ್ ಆಗಿದೆ.
ಮ್ಯಾಚ್ ನಡೆಯುವುದಕ್ಕೂ ಮುನ್ನ ಉಭಯ ತಂಡಗಳು ಪುಟಾಣಿ ಮಕ್ಕಳೊಂದಿಗೆ ರಾಷ್ಟ್ರಗೀತೆ ಹಾಡುವುದಕ್ಕಾಗಿ ಸಾಲಾಗಿ ನಿಂತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಕೌರ್ ಮುಂದೆ ಸಾಲಲ್ಲಿ ನಿಂತಿದ್ದ ಬಾಲಕಿ ಬಿಸಿಲ ಬೇಗೆಗೆ ಅಸ್ವಸ್ಥಳಾಗುತ್ತಿರುವುದನ್ನು ಕೌರ್ ಗಮನಿಸಿದ್ದಾರೆ. ರಾಷ್ಟ್ರಗೀತೆ ಮುಕ್ತಾಯವಾದಂತೆ ಬಾಲಕಿಯನ್ನು ತಕ್ಷಣ ಎತ್ತಿಕೊಂಡು ಹೋದ ಅವರು ಅಧಿಕಾರಿಗಳಿಗೆ ಹಸ್ತಾಂತರ ಮಾಡಿದ್ದಾರೆ. ಅವರ ಈ ಕಾಳಜಿಯ ಕಾರ್ಯ ಭಾರೀ ಶ್ಲಾಘನೆಗೆ ಪಾತ್ರವಾಗುತ್ತಿದೆ.
— Mushfiqur Fan (@NaaginDance) November 11, 2018
source: indiatoday
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.